ಕನ್ನಡಪ್ರಭ ವಾರ್ತೆ ಮಡಿಕೇರಿ
ಸುಂಟಿಕೊಪ್ಪದ ವಾಹನ ಚಾಲಕರ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಸಾರ್ವಜನಿಕ ವಿಭಾಗದಲ್ಲಿ ಪ್ರಥಮ, ಕಾಲೇಜು ವಿಭಾಗದಲ್ಲಿ ಪ್ರಥಮ, ಹಾಗೂ ಪ್ರಾಥಮಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿ ಸಾಧನೆ ಮಾಡಿದೆ. ಇದರೊಂದಿಗೆ ಮುಳಿಯ ಜುವೆಲ್ಸ್ ಆನ್ಲೈನ್ ಮೂಲಕ ನಡೆಸಿದ ಮುಳಿಯ ರಾಷ್ಟ್ರ ಸಿಂಚನ ನೃತ್ಯ ಸ್ಪರ್ಧೆಯ ಗುಂಪು ಸ್ಪರ್ಧೆ ವಿಭಾಗದಲ್ಲಿಯೂ ದ್ವಿತೀಯ ಸ್ಥಾನ ಗಳಿಸಿದೆ. ಕಿಂಗ್ಸ್ ಆಫ್ ಕೂರ್ಗ್ನ ನೃತ್ಯ ಸಂಯೋಜಕರಾದ ಮಹೇಶ್ ಹಾಗೂ ಕಿರಣ್ ಅವರು ಮಾರ್ಗದರ್ಶನದಲ್ಲಿ ಸಂಸ್ಥೆಯ ಕಲಾವಿದರು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಸಂವಿಧಾನ ಜಾಗೃತಿ ಜಾಥಾ:ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಸಮೀಪದ ಕಕ್ಕಬೆ - ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯಿತು.
ಕಕ್ಕಬ್ಬೆಯ ಆಟೋ ಚಾಲಕರು ಆಟೋ ಮೆರವಣಿಗೆ ನಡೆಸಿ ಜಾಗೃತಿ ಜಾಥಾಕ್ಕೆ ಸ್ವಾಗತ ಕೋರಿ ಗಮನ ಸೆಳೆದರು.ಬಳಿಕ ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘ ದ ಸಭಾಂಗಣದಲ್ಲಿ ಆಯೋಜಿಸಲಾದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪ ಪಿ.ಎಲ್ ಅಧ್ಯಕ್ಷತೆ ವಹಿಸಿದ್ದರು.
ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ಛದ್ಮವೇಷ, ಭಾಷಣ, ಪ್ರಬಂಧ, ನೃತ್ಯ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ವಿತರಿಸಲಾಯಿತು.ಸಂವಿಧಾನದ ರಚನೆ, ಆಶಯಗಳ ಕುರಿತು ಶಿಕ್ಷಕಿ ರಜಿನಾ ಮತ್ತು ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ ಮಾತನಾಡಿ ಜಾತದ ಸಮಗ್ರ ಮಾಹಿತಿ ನೀಡಿದರು.