ಕಿನ್ನಿಗೋಳಿ: ಉಚಿತ ಪುಸ್ತಕ ವಿತರಣೆ

KannadaprabhaNewsNetwork |  
Published : Jun 03, 2025, 12:31 AM ISTUpdated : Jun 03, 2025, 12:32 AM IST
 ಕಿನ್ನಿಗೋಳಿ ಶ್ರೀ ವೀರಮಾರುತಿ ವ್ಯಾಯಾಮ ಶಾಲೆ ಉಚಿತ ಪುಸ್ತಕ ವಿತರಣೆ | Kannada Prabha

ಸಾರಾಂಶ

ಕಿನ್ನಿಗೋಳಿಯ ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯ ಸಂಸ್ಥೆಯ ಸಭಾಭವನದಲ್ಲಿ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಕನ್ನಡಪ್ರಭವಾರ್ತೆ ಮೂಲ್ಕಿ

ಆರ್ಥಿಕವಾಗಿ ಶಿಕ್ಷಣದಿಂದ ವಂಚಿತರಾಗುವ ವಿದ್ಯಾರ್ಥಿಗಳಿಗೆ ಸಂಘ, ಸಂಸ್ಥೆಗಳು ಪ್ರೋತ್ಸಾಹ ನೀಡುವ ಕಾರ್ಯ ಮಾಡಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಕಿನ್ನಿಗೋಳಿಯ ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯ ಸಂಸ್ಥೆಯ ಸಭಾಭವನದಲ್ಲಿ‌ ನಡೆದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂದರ್ಭ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದು ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ರಾಜ್ಯ‌ ಮತ್ತು ರಾಷ್ಟ್ರ ಮಟ್ಟದಲ್ಲಿ‌ ಪ್ರಶಸ್ತಿ ಪಡೆದ ಸಂಸ್ಥೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸುಮಾರು 200 ಮಂದಿ ವಿದ್ಯಾರ್ಥಿಗಳಿಗೆ ಸುಮಾರು 1 ಲಕ್ಷ ರು. ಪುಸ್ತಕ ವಿತರಿಸಲಾಯಿತು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಕಿನ್ನಿಗೋಳಿಯ ಯುಗಪುರುಷದ ಭವನಾಭಿರಾಮ ಉಡುಪ, ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಪುರಂದರ ಶೆಟ್ಟಿ, ಸದಸ್ಯರಾದ ಸೇಸರಾಮ ಶೆಟ್ಟಿ ಲೋಕಯ್ಯ ಸಾಲಿಯಾನ್, ಡೊಲ್ಪಿ ಸಂತುಮಯರ್, ಕೊಂಡೇಲ, ಕರಾಟೆ ಶಿಕ್ಷಕರಾದ ಚಂದ್ರಹಾಸ್, ನಾಗರಾಜ್, ಸ್ಯಾನಿ ಪಿಂಟೋ, ಗುರುರಾಜ್ ಮಲ್ಲಿಗೆಯಂಗಡಿ, ಪ್ರವೀಣ್ ಕುಕ್ಯಾನ್, ಸರೋಜಿನಿ ಗುಜರನ್, ಪವಿತ್ರ ಈಶ್ವರ್, ಅರುಣ್ ಕುಮಾರ್, ಮೊನ್ನಪ್ಪ ಗುಜರನ್ ಮತ್ತಿತರರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಈಶ್ವರ್ ಕಟೀಲ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಶಿಕ್ಷಕ ಕೇಶವ ಕರ್ಕೇರ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ