ಕಿನ್ನಿಗೋಳಿ: ಯುಗಪುರುಷದಲ್ಲಿ ಗೂಡುದೀಪ ಸ್ಪರ್ಧೆ

KannadaprabhaNewsNetwork |  
Published : Oct 25, 2025, 01:02 AM IST
ಕಿನ್ನಿಗೋಳಿ ಯುಗಪುರುಷದಲ್ಲಿ ದೀಪಾವಳಿ ಪ್ರಯುಕ್ತ ಗೂರು ದೀಪ ಸ್ಪರ್ಧೆ | Kannada Prabha

ಸಾರಾಂಶ

ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿಇತ್ತೀಚೆಗೆ ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಯಿತು. ಕರಾವಳಿ ಜಿಲ್ಲೆಗಳ ವಿವಿಧ ಮೂಲೆಗಳಿಂದ 100ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದರು.

ಮೂಲ್ಕಿ: ಕಿನ್ನಿಗೋಳಿ ಯುಗಪುರುಷದ ನೇತೃತ್ವದಲ್ಲಿ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಯಿತು. ಕರಾವಳಿ ಜಿಲ್ಲೆಗಳ ವಿವಿಧ ಮೂಲೆಗಳಿಂದ 100ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದರು.ಸಾಂಪ್ರದಾಯಿಕ ಹಾಗೂ ಆಧುನಿಕ ವಿಭಾಗದಲ್ಲಿ ಸ್ಪರ್ಧೆ ನಡೆದಿದ್ದು ಸಾಂಪ್ರದಾಯಿಕ ವಿಭಾಗ: ಲತಾ ಗುತ್ತಕಾಡು (ಪ್ರ), ದಿವಾಕರ ನಿಡ್ಡೋಡಿ (ದ್ವಿ), ಕಾಂತೇರಿ ಧೂಮಾವತಿ ದೈವಸ್ಥಾನ ಸುರತ್ಕಲ್ (ತೃ), ಆಧುನಿಕ ವಿಭಾಗ: ದಯಾನಂದ ರಾಕೇಶ್ ಅಂಡ್ ಟೀಮ್ ಬಂಟ್ವಾಳ (ಪ್ರ), ಕಾಂತೇರಿ ಧೂಮಾವತಿ ದೈವಸ್ಥಾನ ಸುರತ್ಕಲ್ (ದ್ವಿ), ಅಮಿತ್‌ಕುಮಾರ್ ಸುರತ್ಕಲ್ (ತೃ), ಜನಾರ್ದನ ನಿಡ್ಡೋಡಿ (ಸಮಾಧಾನಕರ) ಬಹುಮಾನ ಪಡೆದರು.ಕ.ಸಾ.ಪಂ. ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಸಂಯೋಜಕ ಕಿನ್ನಿಗೋಳಿ ಯುಗಪುರುಷದ ಕೆ. ಭುವನಾಭಿರಾಮ ಉಡುಪ, ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಸಾಯಿನಾಥ ಶೆಟ್ಟಿ, ಫೋಟೋಗ್ರಾಫರ್ಸ್ ಅಸೋಸಿಯೇಶನ್ ಅಧ್ಯಕ್ಷ ಶ್ರೀನಿವಾಸ್ ಬಪ್ಪನಾಡು, ಬಪ್ಪನಾಡು ಇನ್‌ಸ್ಪೈರ್‌ ಲಯನ್ಸ್ ಕ್ಲಬ್‌ ಸ್ಥಾಪಕಾಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಪ್ರತಿಭಾ ಹೆಬ್ಬಾರ್, ಕಿನ್ನಿಗೋಳಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪರಮೇಶ್ವರ ಶೆಟ್ಟಿಗಾರ್, ತೀರ್ಪುಗಾರರಾದ ಪದ್ಮನಾಭ ಸುರತ್ಕಲ್, ಪ್ರಕಾಶ್ ಸುವರ್ಣ, ರಾಜೇಂದ್ರಕುಮಾರ್ ಮೂಲ್ಕಿ ಮತ್ತಿತರರಿದ್ದರು. ಶರತ್ ಶೆಟ್ಟಿ, ಸುಮಿತ್ ಕುಮಾರ್, ಅನುಷಾ ಕೊಡೆತ್ತೂರು ಸಹಕರಿಸಿದರು.ಕಿನ್ನಿಗೋಳಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಭ್ರಾಮರೀ ಮಹಿಳಾ ಸಮಾಜ ಮೆನ್ನಬೆಟ್ಟು, ಕಿನ್ನಿಗೋಳಿಯ ಲಯನ್ಸ್ ಕ್ಲಬ್, ರೋಟರಿ ಕ್ಲಬ್, ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ, ಯಕ್ಷಲಹರಿ, ವಿಜಯಾ ಕಲಾವಿದರು, ಕರ್ನಾಟಕ ಸ್ಟೇಟ್ ಟೈಲರ್ಸ್‌ ಅಸೋಸಿಯೇಶನ್ ಕಿನ್ನಿಗೋಳಿ ವಲಯ, ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್, ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಮೂಲ್ಕಿ ವಲಯ ಹಾಗೂ ಲಯನ್ಸ್ ಕ್ಲಬ್ ಬಪ್ಪನಾಡು ಇನ್‌ಸ್ಪಾಯರ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!