ಕನ್ನಡಪ್ರಭ ವಾರ್ತೆ ರಾಮನಗರ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಸಹೋದರರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿಯವರು ಕಿರಾತಕ ಪದ ಬಳಕೆ ಮಾಡಿದ್ದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು.
ಹಳ್ಳಿಗಳಲ್ಲಿ ನಡೆಯುತ್ತದೆಯೆಂದು ನೀವು ನಿಮ್ಮ ಚೇಲಾಗಳಿಗೆ ಹೇಳಿ ಕಿತಾಪತಿ ಮಾಡಬಹುದು. ಜನ ನನ್ನ ಕ್ಷೇತ್ರದಲ್ಲಿ ನೆಮ್ಮದಿಯಿಂದ ಇದ್ದಾರೆ. ಚುನಾವಣೆಯ ಬಳಿಕ ಪಕ್ಷ, ಜಾತಿ ಭೇದ ಮರೆತು ಕೆಲಸ ಮಾಡುತ್ತಿದ್ದೇವೆ. ಬಹಳಷ್ಟು ನಾಯಕರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದಾರೆ. ನಮ್ಮ ಕೆಲಸ, ನಮ್ಮ ಪ್ರೀತಿ, ವಿಶ್ವಾಸ ನೋಡಿ ಅವರು ಬರುತ್ತಿದ್ದಾರೆ ಎಂದು ಹೇಳಿದರು.ರಾಮನಗರದಲ್ಲಿ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಇಕ್ಬಾಲ್ ರವರು, ನಿಮ್ಮ ಸರ್ಕಾರ ಇದ್ದಾಗ ಏನೇನು ಮಾಡಿದ್ದೀರಿ ನೋಡಿದ್ದೇವೆ. ಪಿಡಿಒ ಮಟ್ಟದಲ್ಲಿ ಹಣದ ವವ್ಯಹಾರ ಮಾಡಿದ್ದೀರಿ. ಅಧಿಕಾರಿಗಳ ಜೊತೆ ಹೇಗೆ ನಡೆದುಕೊಂಡಿದ್ದೀರಿ ಎಂಬುದನ್ನು ಅಧಿಕಾರಿಗಳೇ ಹೇಳಿದ್ದಾರೆ. ಜಮೀನ್ದಾರರ ಮಕ್ಕಳು ನಾವು, ನಮಗೆ ಬೇಕಾದಷ್ಟು ದೇವರು ಕೊಟ್ಟಿದ್ದಾನೆ. ಒಂದು ಟೀ ನೂ ಕುಡಿದವರಲ್ಲ, ಮದ್ಯಪಾನ ಮಾಡಿದವರೂ ಅಲ್ಲ. ಕಮಿಷನ್ ಆರೋಪ ಒಂದೇ ಒಂದು ಸಾಬೀತಾದರೆ ರಾಜಕಾರಣ ಬಿಟ್ಟು, ನಿಮ್ಮ ಮುಖನೂ ನೋಡಲ್ಲ ಎಂದು ಸವಾಲು ಹಾಕಿದರು.
ಈ ರಾಜ್ಯಕ್ಕೆ, ಇಡೀ ದೇಶಕ್ಕೆ ನಿಮ್ಮನ್ನು ಪರಿಚಯಿಸಿದವರೇ ರಾಮನಗರದ ಜನ. ಆದರೆ, ನೀವು ಅವರಿಗೆ ಸರಿಯಾಗಿ ಸ್ಪಂದಿಸಲೇ ಇಲ್ಲ. ನೀವು ಅಧಿಕಾರ ಸಿಕ್ಕಿದಾಗ ತೋರಿಸಿರುವ ಅಹಂ ನಿಮ್ಮನ್ನು ತಿಂದು ಹಾಕಿದೆ, ಬೇರೇನಿಲ್ಲ. ನಿಮ್ಮನ್ನು ಮುಖ್ಯಮಂತ್ರಿ ಮಾಡಿ ಅರ್ಕಾವತಿಯ ಕೊಳಕು ನೀರು ಕುಡಿಯಬೇಕಾ? ಬೆಂಗಳೂರು ಸ್ಯಾನಟಿರಿ ನೀರು ಫಿಲ್ಟರ್ ಮಾಡಿ ಕುಡಿಯಬೇಕು ಎನ್ನಲು ನಿಮಗೆ ಹುದ್ದೆ ಕೊಡಬೇಕಾ? ಮುಖ್ಯಮಂತ್ರಿ ಆಗಿ ಒಂದು ಸೈಟ್ ಕೊಡೋದಕ್ಕೆ ಆಗಿರಲಿಲ್ಲ. ನಿಮ್ಮ ಪೆನ್ನು ಪೇಪರ್ ಬಳಸಿ ರಾಮನಗರವನ್ನು ಮಾದರಿ ಮಾಡಬಹುದಾಗಿತ್ತು. ಒಂದೇ ಒಂದು ರಸ್ತೆಯನ್ನೂ ಮಾಡಿಲ್ಲ ಎಂದು ಕಿಡಿ ಕಾರಿದರು.