ಕಿತ್ತೂರ ಚೆನ್ನಮ್ಮ ಕನ್ನಡ ನಾಡಿನ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ

KannadaprabhaNewsNetwork |  
Published : Nov 09, 2023, 01:00 AM ISTUpdated : Nov 09, 2023, 01:01 AM IST
ಪೊಟೋ-ಲಕ್ಷ್ಮೇಶ್ವರ ತಾಲೂಕಾ ವೀರಶೈವ ಪಂಚಮಸಾಲಿ ಸಂಘದವತಿಯಿಂದ ಚನ್ನಮ್ಮನ ಮನೆ ಕಾರ್ಯಕ್ರಮದ ಅಂಗವಾಗಿ ಶೇಖಪ್ಪ ಹುರಕಟ್ಲಿ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕ ಎಸ್.ಎಫ್.ಆದಿ ಉಪನ್ಯಾಸ ನೀಡಿದರು.    | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ ಶೌರ್ಯ ಮತ್ತು ಸಾಹಸ ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿವೆ ಎಂದು ನಿವೃತ್ತ ಶಿಕ್ಷಕ ಎಸ್.ಎಫ್.ಆದಿ ಹೇಳಿದರು.ಲಕ್ಷ್ಮೇಶ್ವರ ತಾಲೂಕು ವೀರಶೈವ ಪಂಚಮಸಾಲಿ ಸಂಘದ ವತಿಯಿಂದ ಸೋಮವಾರ ಸಂಜೆ ಪಟ್ಟಣದ ಸೊಪ್ಪಿನಕೇರಿ ಓಣಿಯ ಶೇಕಪ್ಪ ಹುರಕಡ್ಲಿ ನಿವಾಸದಲ್ಲಿ ಚೆನ್ನಮ್ಮನ ಮನೆ-12ನೇ ಸಂಚಿಕೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

ಚೆನ್ನಮ್ಮನ ಮನೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಆದಿ

ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರ

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ ಶೌರ್ಯ ಮತ್ತು ಸಾಹಸ ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿವೆ ಎಂದು ನಿವೃತ್ತ ಶಿಕ್ಷಕ ಎಸ್.ಎಫ್.ಆದಿ ಹೇಳಿದರು.

ಲಕ್ಷ್ಮೇಶ್ವರ ತಾಲೂಕು ವೀರಶೈವ ಪಂಚಮಸಾಲಿ ಸಂಘದ ವತಿಯಿಂದ ಸೋಮವಾರ ಸಂಜೆ ಪಟ್ಟಣದ ಸೊಪ್ಪಿನಕೇರಿ ಓಣಿಯ ಶೇಕಪ್ಪ ಹುರಕಡ್ಲಿ ನಿವಾಸದಲ್ಲಿ ಚೆನ್ನಮ್ಮನ ಮನೆ-12ನೇ ಸಂಚಿಕೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

ಕಿತ್ತೂರ ರಾಣಿ ಚೆನ್ನಮ್ಮ ಬ್ರೀಟಿಷರ ವಿರುದ್ಧ ಹೋರಾಡುವ ಮೂಲಕ ಕನ್ನಡ ನಾಡಿನ ಇತಿಹಾಸದಲ್ಲಿ ಅಜರಾಮವಾಗಿದ್ದಾರೆ. ಭಾರತದ ಸ್ವಾತಂತ್ರ್ಯದ ಚರಿತ್ರೆಯಲ್ಲಿ ಮೊದಲ ಸ್ವಾತಂತ್ರ್ಯದ ಕಹಳೆ ಊದುವ ಮೂಲಕ ಬ್ರೀಟಿಷರ ನಿದ್ದೆಗೆಡಿಸಿದ್ದರು. ಭಾರತದ ಅಖಂಡತೆಗೆ ಸವಾಲಾಗಿದ್ದ ಬ್ರೀಟಿಷರನ್ನು ಸೆದೆ ಬಡೆದು ಭಾರತೀಯರ ಸ್ವಾತಂತ್ರ್ಯ ಪ್ರೇಮವನ್ನು ಎತ್ತಿ ತೋರಿಸುವ ಕಾರ್ಯ ಮಾಡಿದರು. ಅವರ ಆದರ್ಶಗಳು ಇಂದಿಗೂ ನಮಗೆ ಸ್ಪೂರ್ತಿದಾಯಕವಾಗಿವೆ ಎಂದು ಹೇಳಿದರು.

ಈ ವೇಳೆ ಸಮಾಜದ ಅಧ್ಯಕ್ಷ ಮಂಜುನಾಥ ಮಾಗಡಿ ಮಾತನಾಡಿದರು. ಸಭೆಯಲ್ಲಿ ಚಂಬಣ್ಣ ಬಾಳಿಕಾಯಿ, ಶೇಖಪ್ಪ ಹುರಕಡ್ಲಿ, ಬಸವರಾಜ ಉಮಚಗಿ, ಶಿವನಗೌಡ್ರ ಅಡ್ರಕಟ್ಟಿ, ಫಕ್ಕೀರೇಶ ಕವಲೂರ, ಬಸವರಾಜ ಪುಟಾಣಿ, ನಾಗರಾಜ ಚಿಂಚಲಿ, ಶಿವಲಿಂಗಪ್ಪ ಗುಡಗೇರಿ, ಜಯಪ್ರಕಾಶ ಹೊಟ್ಟಿ, ವೀರಣ್ಣ ಕಟಗಿ, ರಾಜು ಲಿಂಬಿಕಾಯಿ, ಮಹಾಂತೇಶ ಗೋಡಿ, ನಾಗರಾಜ ಕಳಸಾಪೂರ ಇದ್ದರು.

ಸ್ನೇಹಾ ಹೊಟ್ಟಿ ಸ್ವಾಗತಿಸಿದರು, ಚಂದ್ರು ಮಾಗಡಿ ಕಾರ್ಯಕ್ರಮ ನಿರ್ವಹಿಸಿದರು. ಜ್ಯೋತಿ ಚೌಕನವರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು : ನಗರದ ವಿವಿಧೆಡೆ ನಾಳೆ ವಿದ್ಯುತ್ ವ್ಯತ್ಯಯ-ಎಲ್ಲೆಲ್ಲಿ ?
ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌