ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿಯಾಗಿ ಕೆ.ಕೆ.ಕೃಷ್ಣಮೂರ್ತಿ

KannadaprabhaNewsNetwork |  
Published : Sep 30, 2024, 01:19 AM IST
ಹೊಳೆನರಸೀಪುರ ತಾ. ತಹಸೀಲ್ದಾರ್ ಕೆ.ಕೆ.ಕೃಷ್ನಮೂರ್ತಿ ಅವರು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಎಂಬ ಪ್ರಶಸ್ತಿ ಹಾಗೂ ಪಾರಿತೋಷಕವನ್ನು ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರಿಂದ ಸ್ವೀಕರಿಸಿದರು. | Kannada Prabha

ಸಾರಾಂಶ

ಹೊಳೆನರಸೀಪುರ: ತಾಲೂಕಿನ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಅವರ ಕಾರ್ಯಕ್ಷಮತೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಎಂದು ಗುರುತಿಸಿ, ನೀಡಿದ ಪ್ರಶಸ್ತಿ ಹಾಗೂ ಪಾರಿತೋಷಕವನ್ನು ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರಿಂದ ಶುಕ್ರವಾರ ಸ್ವೀಕರಿಸಿದರು.

ಹೊಳೆನರಸೀಪುರ: ತಾಲೂಕಿನ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಅವರ ಕಾರ್ಯಕ್ಷಮತೆಯನ್ನು ಗುರುತಿಸಿ, ಕರ್ನಾಟಕ ರಾಜ್ಯ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಎಂದು ಗುರುತಿಸಿ, ನೀಡಿದ ಪ್ರಶಸ್ತಿ ಹಾಗೂ ಪಾರಿತೋಷಕವನ್ನು ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರಿಂದ ಶುಕ್ರವಾರ ಸ್ವೀಕರಿಸಿದರು.

ಬರ ಪರಿಸ್ಥಿತಿಯಲ್ಲಿ ವಿಳಂಬವಿಲ್ಲದೇ ಪರಿಹಾರ ವಿತರಣೆ, ತಹಸೀಲ್ದಾರ್‌ ನ್ಯಾಯಾಲಯದಲ್ಲಿದ್ದ 520 ಪ್ರಕರಣಗಳ ತ್ವರಿತ ವಿಲೇವಾರಿ, ಖಾತೆ, ಪೌತಿ ಖಾತೆ ಹಾಗೂ ಪೋಡಿಯ ತ್ವರಿತ ವಿಲೇವಾರಿ ಜತೆಗೆ ಮಂಜೂರಾತಿಗಳನ್ನು ಮಾಡಿ ಜಿಲ್ಲೆಗೆ ಅತ್ಯುತ್ತಮ ತಾಲೂಕು ಕಚೇರಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಸಾರ್ವಜನಿಕರೊಂದಿಗೆ ಹಾಗೂ ಸಿಬ್ಬಂದಿ ಜತೆಗೆ ಉತ್ತಮ ನಡವಳಿಕೆ ಹಾಗೂ ಮಾತಿನಲ್ಲಿ ಸೌಮ್ಯತೆ ಹಾಗೂ ಉತ್ತಮ ಒಡನಾಟದಿಂದ ವಿಳಂಬವಿಲ್ಲದೇ ಕಡತಗಳ ವಿಲೇವಾರಿ ಮತ್ತು ಕರ್ತವ್ಯದಲ್ಲಿ ಶಿಸ್ತು ಇವರ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ. ಆದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ಅತ್ಯುತ್ತಮ ತಹಸೀಲ್ದಾರ್‌ ಪ್ರಶಸ್ತಿಗೆ 20 ಅಧಿಕಾರಿಗಳನ್ನು ಗುರುತಿಸಿದ್ದು, ಅದರಲ್ಲಿ ತಾಲೂಕಿನ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರನ್ನು ಗುರುತಿಸಿದೆ. ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮ, ಉಪ ವಿಭಾಗಾಧಿಕಾರಿ ಮಾರುತಿ ಹಾಗೂ ಇತರೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಪ್ರಶಸ್ತಿ ಸ್ವೀಕರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!