ಕೆಎಂಸಿ: ಡಾ. ಪ್ರತಾಪ್ ಕುಮಾರ್ ಸಮಾಲೋಚನೆಗಾಗಿ ಈಗ ಲಭ್ಯ

KannadaprabhaNewsNetwork |  
Published : Jun 04, 2024, 12:32 AM IST
ಪ್ರತಾಪ್03 | Kannada Prabha

ಸಾರಾಂಶ

ತಮ್ಮ ಅಸಾಧಾರಣ ಪರಿಣತಿ ಮತ್ತು ಸಹಾನುಭೂತಿಯ ಆರೈಕೆಗಾಗಿ ಗುರುತಿಸಲ್ಪಟ್ಟಿರುವ ಡಾ. ಪ್ರತಾಪ್ ಕುಮಾರ್ ಅವರು ಟೆಸ್ಟ್ ಟ್ಯೂಬ್ ಬೇಬಿ (ಐವಿಎಫ್) ಕಾರ್ಯವಿಧಾನಗಳಲ್ಲಿ ತಮ್ಮ ವಿಶೇಷ ಕೌಶಲ್ಯಗಳ ಮೂಲಕ 10,000ಕ್ಕೂ ಹೆಚ್ಚು ಶಿಶುಗಳ ಜನನವನ್ನು ಸುಗಮಗೊಳಿಸಿರುವ ಗಮನಾರ್ಹ ದಾಖಲೆಯನ್ನು ಹೊಂದಿದ್ದಾರೆ.

ಕನ್ನಡಪ್ರಭ ವಾರ್ತೆ ಮಣಿಪಾಲ

ಸಂತಾನೋತ್ಪತ್ತಿ ಔಷಧ ತಜ್ಞ ಮತ್ತು ಶಸ್ತ್ರಚಿಕಿತ್ಸಕ ಡಾ. ಪ್ರತಾಪ್ ಕುಮಾರ್ ಎನ್., ಈಗ ಪೂರ್ಣ ಸಮಯಕ್ಕೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಡಾ.ರಾಮದಾಸ್ ಪೈ ಬ್ಲಾಕ್‌ನಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ. ಜೂನ್‌ 3ರಿಂದ ಜಾರಿಗೆ ಬರುವಂತೆ ಅವರು ಡಾ. ರಾಮದಾಸ್ ಪೈ ಬ್ಲಾಕ್‌ನಲ್ಲಿ ಪೂರ್ವ ನಿಗದಿ (ಅಪಾಯಿಟ್‌ಮೆಂಟ್‌) ಮೂಲಕ ತಮ್ಮ ಪರಿಣಿತ ಸೇವೆಗಳನ್ನು ನೀಡಲಿದ್ದಾರೆ.

ತಮ್ಮ ಅಸಾಧಾರಣ ಪರಿಣತಿ ಮತ್ತು ಸಹಾನುಭೂತಿಯ ಆರೈಕೆಗಾಗಿ ಗುರುತಿಸಲ್ಪಟ್ಟಿರುವ ಡಾ. ಪ್ರತಾಪ್ ಕುಮಾರ್ ಅವರು ಟೆಸ್ಟ್ ಟ್ಯೂಬ್ ಬೇಬಿ (ಐವಿಎಫ್) ಕಾರ್ಯವಿಧಾನಗಳಲ್ಲಿ ತಮ್ಮ ವಿಶೇಷ ಕೌಶಲ್ಯಗಳ ಮೂಲಕ 10,000ಕ್ಕೂ ಹೆಚ್ಚು ಶಿಶುಗಳ ಜನನವನ್ನು ಸುಗಮಗೊಳಿಸಿರುವ ಗಮನಾರ್ಹ ದಾಖಲೆಯನ್ನು ಹೊಂದಿದ್ದಾರೆ. ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅವರ ಉಪಸ್ಥಿತಿಯು ಸಂತಾನೋತ್ಪತ್ತಿ (ಬಂಜೆತನಕ್ಕೆ ಚಿಕಿತ್ಸೆ) ಸಹಾಯವನ್ನು ಬಯಸುವ ಹಲವಾರು ದಂಪತಿಗೆ ಅಪಾರ ಸಂತೋಷ ಮತ್ತು ಭರವಸೆಯನ್ನು ತರುತ್ತದೆ ಎಂದು ನಿರೀಕ್ಷಿಸಲಾಗಿದೆ.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ, ಡಾ. ಪ್ರತಾಪ್ ಕುಮಾರ್ ಅವರ ಪೂರ್ಣ ಸಮಯದ ಲಭ್ಯತೆಯ ಬಗ್ಗೆ ತಮ್ಮ ಉತ್ಸಾಹವನ್ನು ವ್ಯಕ್ತಪಡಿಸಿದರು. ಡಾ. ಪ್ರತಾಪ್ ಅವರು ಪ್ರಖ್ಯಾತ ಸಂತಾನೋತ್ಪತ್ತಿ ಔಷಧಿ ಮತ್ತು ಶಸ್ತ್ರಚಿಕಿತ್ಸಕರಾಗಿದ್ದಾರೆ. ಅವರ ಪರಿಣತಿಯು ಮಕ್ಕಳನ್ನು ಬಯಸುವ ಅಸಂಖ್ಯಾತ ದಂಪತಿಗಳಿಗೆ ನಗುವನ್ನು ತಂದಿದೆ. ಅವರು ಈಗ ಕಸ್ತೂರ್ಬಾ ಆಸ್ಪತ್ರೆಯ ಡಾ. ರಾಮದಾಸ್ ಪೈ ಬ್ಲಾಕ್ ಸಂಪೂರ್ಣವಾಗಿ ಲಭ್ಯವಿದ್ದಾರೆ ಎಂದು ಹೇಳಿದ್ದಾರೆ.

ಸೋಮವಾರದಿಂದ ಶುಕ್ರವಾರದ ವರೆಗೆ, ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಹಾಗೂ ಮಧ್ಯಾಹ್ನ 3 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ಪೂರ್ವ ನಿಗದಿ (ಅಪಾಯಿಂಟ್ಮೆಂಟ್) ಮೂಲಕ ಡಾ. ಪ್ರತಾಪ್ ಕುಮಾರ್ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.ಸಮಯ ನಿಗದಿಪಡಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ದೂರವಾಣಿ: 6364469750 ಸಂಪರ್ಕಿಸುವಂತೆ ಕೋರಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳವಳ್ಳಿಯಲ್ಲಿ ಕೋರೆಗಾಂವ್ ವಿಜಯೋತ್ಸವ ಆಚರಣೆ
ಶಿಲ್ಪಿ ಜಕಣಾಚಾರಿ ಎಂದೆಂದಿಗೂ ಅಮರ