ಹೂವಿನಹಡಗಲಿ: ಭಾರತದ ದೇಶದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಲಿಷ್ಠವಾಗಿರಲು ಸಂವಿಧಾನವೇ ಕಾರಣವಾಗಿದೆ ಎಂದು ತಹಸೀಲ್ದಾರ್ ವಿ. ಕಾರ್ತೀಕ್ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಕೃಷ್ಣನಾಯ್ಕ, ನಾವೆಲ್ಲರೂ ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರದಂತೆ ನಡೆದುಕೊಳ್ಳಬೇಕು. ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಪಾಲಿಸುವ ಜತೆಗೆ ಒಗ್ಗಟ್ಟಾಗಿರಬೇಕು. ದೇಶ ಮತ್ತು ದೇಶದ ಪ್ರಜೆಗಳ ಪ್ರಗತಿಗಾಗಿ ಯುವಶಕ್ತಿಯು ದೇಶಾಭಿಮಾನವನ್ನು ಹೊಂದುವ ಮೂಲಕ ದೇಶದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಪಣ ತೊಡಬೇಕಿದೆ ಎಂದರು.
ನಿವೃತ್ತ ಎಸಿಪಿ ಪಂಪಾಪತಿ ಮಾತನಾಡಿ, ದೇಶದಲ್ಲಿ ಮಹಿಳಾ ಮೀಸಲಾತಿ ಮತ್ತು ಮತದಾನದ ಹಕ್ಕನ್ನು ಸಂವಿಧಾನ ಕಲ್ಪಿಸಿದೆ. ಭಾರತ ಪ್ರಜೆಗಳೆಲ್ಲರಿಗೂ ಸಮಾನವಾದ ಅವಕಾಶಗಳನ್ನು ಮೀಸಲಾತಿಗಳಿಗನುಗುಣವಾಗಿ ಕಲ್ಪಿಸಿಕೊಡಲಾಗಿದೆ. ಯುವ ಶಕ್ತಿಯು ಇರುವ ಅವಕಾಶಗಳನ್ನು ಬಳಿಸಿಕೊಂಡು ಸುಂದರ ಬದುಕು ಕಟ್ಟಿಕೊಳ್ಳುವ ಮೂಲಕ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸಬೇಕಿದೆ ಎಂದರು.ಎನ್ಸಿಸಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಜಿಬಿಆರ್ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಅಮರೇಗೌಡ ಎನ್. ಪಾಟೀಲ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದಕ್ಕಾಗಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಲಾಯಿತು.
ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಜಿಪಂ ಯೋಜನಾಧಿಕಾರಿ ಅಶೋಕ ತೋಟದ, ತಾಪಂ ಇಒ ಜಯರಾಮ ಎಂ. ಚವ್ಹಾಣ್, ಸಿಪಿಐ ಸುಧೀರ್ ಕುಮಾರ್ ಬೆಂಕಿ, ಪುರಸಭೆ ಮುಖ್ಯಾಧಿಕಾರಿ ಪಚ್ಚಿ ಮಲ್ಲೇಶ್ ಸೇರಿದಂತೆ ಇತರರಿದ್ದರು.