ಕನ್ನಡಪ್ರಭ ವಾರ್ತೆ ಕೋಲಾರ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ಆಶ್ರಯದಲ್ಲಿ ತಾಲೂಕಿನ ವೇಮಗಲ್ನ ಕೈಗಾರಿಕಾ ಪ್ರದೇಶದ ಸಾಯಿ ಆಶ್ರಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಹಲವಾರು ಸೌಲಭ್ಯಗಳು ಸಿಗುತ್ತಿವೆ, ಉಚಿತ ಆರೋಗ್ಯ ಸೇವೆ, ಮಕ್ಕಳಿಗೆ ವಿದ್ಯಾರ್ಥಿ ವೇತನ, ಕಟ್ಟಡ ನಿರ್ಮಾಣ ಸಲಕರಣೆ ಖರೀದಿಗೆ ನೆರವು ಇವುಗಳ ಕುರಿತು ತಿಳಿದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿ, ಕಾರ್ಮಿಕರ ಕಲ್ಯಾಣ ನಿಧಿಯ ಹಣ ಕಾರ್ಮಿಕರ ಅಭ್ಯೂದಯಕ್ಕೆ ಬಳಕೆಯಾಗಬೇಕು ಎಂದರು.ಬಾಲ್ಯವಿವಾಹ, ಬಾಲ ಕಾರ್ಮಿಕತೆ ಮೂಲಕ ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗುದನ್ನು ತಪ್ಪಿಸುವಲ್ಲಿ ಸಮುದಾಯ, ಕಾರ್ಮಿಕರು ಮತ್ತು ಸಮುದಾಯ ಸಹಕಾರ ನೀಡಬೇಕು, ಹೆಚ್ಚು ಪ್ರಚಾರ ಒದಗಿಸುವ ಮೂಲಕ ಪೋಷಕರಿಗೆ ಈ ಕುರಿತು ಮಾರ್ಗದರ್ಶನ ನೀಡಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಮುನೇಗೌಡ ಮಾತನಾಡಿ, ಮಕ್ಕಳ ಹಕ್ಕುಗಳಿಗೆ ಚ್ಯುತಿಯುಂಟು ಮಾಡುವುದು ಅಪರಾಧ, ಕಾರ್ಮಿಕರಾದ ನೀವು ನಿಮ್ಮ ಮಕ್ಕಳನ್ನು ವಯಸ್ಸಿಗೆ ಮುನ್ನವೇ ದುಡಿಮೆಗೆ ಕಳುಹಿಸಬಾರದು ಎಂದ ಅವರು,ಮಕ್ಕಳನ್ನು ಓದಿಸಿ ಸಾಧನೆಗೆ ದಾರಿ ತೋರುವ ಪೋಷಕರೇ ಬಾಲ್ಯವಿವಾಹಕ್ಕೆ ನೂಕುವುದು ಸರಿಯಲ್ಲ ಎಂದರು. ಲೈಂಗಿಕ ದೌರ್ಜನ್ಯ ನಿಷೇಧ, ಪರಿಹಾರ ಕಾಯ್ದೆ ನಮ್ಮ ದೇಶದಲ್ಲಿ ಜಾರಿಯಲ್ಲಿದ್ದು ಇದರನ್ವಯ ಪ್ರತಿ ಕಾರ್ಖಾನೆಗಳಲ್ಲಿ ಮಹಿಳಾ ಕಾರ್ಮಿಕರಿಗೆ ಅನುಕೂಲಕ್ಕಾಗಿ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಅಂತರಿಕ ದೂರುಗಳ ಪರಿಹಾರ ಸಮಿತಿಯನ್ನು ಕಡ್ಡಾಯವಾಗಿ ರಚಿಸಬೇಕೆಂದು ಸಲಹೆ ನೀಡಿದರು.
ಸಾಯಿ ಆಶ್ರಯ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ನ ಅಶೋಕ್ ಮಾತನಾಡಿದರು