ಕಾಲಜ್ಞಾನದ ವೈಜ್ಞಾನಿಕ ಸತ್ಯಗಳ ಅರಿವು ಅಗತ್ಯ: ಶಾಸಕ ಧೀರಜ್ ಮುನಿರಾಜ್

KannadaprabhaNewsNetwork |  
Published : Apr 30, 2026, 01:15 AM IST
ದೊಡ್ಡಬಳ್ಳಾಪುರದ ವೀರಬ್ರಹ್ಮೇಂದ್ರಸ್ವಾಮಿ ಸೇವಾ ಟ್ರಸ್ಟ್‌ ವತಿಯಿಂದ ನಡೆದ ಆರಾಧನಾ ಮಹೋತ್ಸವದಲ್ಲಿ ಶಾಸಕ ಧೀರಜ್‌ ಮುನಿರಾಜ್‌ ಅವರನ್ನು ಅಭಿನಂದಿಸಲಾಯಿತು. | Kannada Prabha

ಸಾರಾಂಶ

ಟ್ರಸ್ಟ್‌ ವತಿಯಿಂದ ಪ್ರತಿವರ್ಷ ಆರಾಧನಾ ಮಹೋತ್ಸವ ನಡೆಸಿಕೊಂಡು ಬರಲಾಗುತ್ತಿದೆ. ಜ್ಞಾನದ ಕೊರತೆಯಿಂದ ವೈಜ್ಞಾನಿಕ ಸತ್ಯಗಳಿಂದ ದೂರ ಉಳಿದಿರುವ ಸಮಾಜ, ಕಾಲಜ್ಞಾನಿಗಳ ಚಿಂತನೆಗಳ ಬಗ್ಗೆ ಅರಿತುಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಇಲ್ಲಿನ ವೀರ ಬ್ರಹ್ಮೇಂದ್ರಸ್ವಾಮಿ ಸೇವಾ ಟ್ರಸ್ಟ್‌ ವತಿಯಿಂದ ವೀರಬ್ರಹ್ಮೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆಯಿತು.

ವಿಶೇಷವಾಗಿ ಅಲಂಕರಿಸಿದ್ದ ಭಾವಚಿತ್ರಕ್ಕೆ ವಿಶ್ವಕರ್ಮ ಸಮುದಾಯದವರಿಂದ ಪೂಜೆ ಸಲ್ಲಿಸಲಾಯಿತು. ವಿವಿಧ ಕಲಾವಿದರಿಂದ ವೀರಬ್ರಹ್ಮೇಂದ್ರ ಸ್ವಾಮಿಗಳ ಕುರಿತ ಗೀತೆಗಳ ಗಾಯನ ನಡೆಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾಸಕ ಧೀರಜ್ ಮುನಿರಾಜು ಮಾತನಾಡಿ, ವೀರಬ್ರಹ್ಮೇಂದ್ರ ಸ್ವಾಮಿಗಳ ತತ್ವಗಳನ್ನು ಅರ್ಥ ಮಾಡಿಕೊಳ್ಳುವ ಮೂಲಕ ಅವರ ಆರಾಧನೆಯನ್ನು ಅರ್ಥಪೂರ್ಣವಾಗಿಸಬೇಕಿದೆ. ಅವರ ಕಾಲಜ್ಞಾನ ವೈಜ್ಞಾನಿಕ ಸತ್ಯಗಳನ್ನು ಹೇಳುತ್ತಾ ಬಂದಿದ್ದು, ಬಹುಪಾಲು ನಿಜವಾಗಿವೆ. ಮಹನೀಯರ ತತ್ವಾದರ್ಶ ಸಮಾಜಕ್ಕೆ ದಾರಿದೀಪ ಎಂದು ಹೇಳಿದರು.

ವೀರಬ್ರಹ್ಮೇಂದ್ರಸ್ವಾಮಿ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಮಾತನಾಡಿ, ಟ್ರಸ್ಟ್‌ ವತಿಯಿಂದ ಪ್ರತಿವರ್ಷ ಆರಾಧನಾ ಮಹೋತ್ಸವ ನಡೆಸಿಕೊಂಡು ಬರಲಾಗುತ್ತಿದೆ. ಜ್ಞಾನದ ಕೊರತೆಯಿಂದ ವೈಜ್ಞಾನಿಕ ಸತ್ಯಗಳಿಂದ ದೂರ ಉಳಿದಿರುವ ಸಮಾಜ, ಕಾಲಜ್ಞಾನಿಗಳ ಚಿಂತನೆಗಳ ಬಗ್ಗೆ ಅರಿತುಕೊಳ್ಳಬೇಕು ಎಂದರು.

ಇದೇ ವೇಳೆ ವಿಶ್ವಕರ್ಮ ಸಮುದಾಯದ ಗಣ್ಯರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ನಿಗಮದ ಅಧ್ಯಕ್ಷ ಪಿ.ಸುಜ್ಞಾನಮೂರ್ತಿ, ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಈಶ್ವರಾಚಾರ್, ಬಿ.ಉಮೇಶ್, ಬಾಬು ಪತ್ತಾರ್, ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಶೋಭಾ, ರಾಜ್ಯ ಉಪಾಧ್ಯಕ್ಷ ರವಿಶಂಕರ್, ಶರತ್ ಚಂದ್ರ, ಲಕ್ಷ್ಮಣ್, ಚಂದ್ರಶೇಖರ್, ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದ ರಾಜ್ಯ ಅಧ್ಯಕ್ಷ ಎಚ್.ಎಸ್.ನಾಗೇಶ್ ಹಾಗೂ ಟ್ರಸ್ಟಿನ ಗೌರವ ಅಧ್ಯಕ್ಷ ಬೋಜಾಚಾರ್, ಅಧ್ಯಕ್ಷ ವೆಂಕಟಾಚಲಪತಿ, ಪ್ರಧಾನ ಕಾರ್ಯದರ್ಶಿ ಸೋಮಶೇಖ‌ರ್, ಕುಮಾರ್, ಪರಮಶಿವಮೂರ್ತಿ, ಯಶೋಧ ಕುಮಾರ್, ವೇಣುಗೋಪಾಲಾಚಾ‌ರ್, ಮೋಹನಾಚಾ‌ರ್, ಜಗದೀಶಾಚಾರ್, ಮಂಜುನಾಥ್, ಮನೋಹರ್, ವೆಂಕಟೇಶ್ ಮೂರ್ತಿ, ನಾರಾಯಣಚಾ‌ರ್, ರಮೇಶಾಚಾ‌ರ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜನರಿಗೆ ನೀರು, ಜಾನುವಾರಿಗೆ ಮೇವಿನ ಕೊರತೆಯಾದಂತೆ ಕ್ರಮವಹಿಸಿ: ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಡಿಕೆಶಿ ಸೂಚನೆ
ಅಭಿವೃದ್ಧಿ ಆಗಿಲ್ಲವೆಂದು ದಿನೇಶ ಶೆಟ್ಟಿ ಕೆಪಿಸಿಸಿಗೆ ಮನದಟ್ಟು