ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ

KannadaprabhaNewsNetwork |  
Published : Mar 19, 2026, 02:30 AM IST
ಚಿತ್ರ.1: ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಸಾಪದ ಹಿರಿಯ ಸದಸ್ಯ ಬಿ.ಸಿ.ದಿನೇಶ್ ಅವರನ್ನು ಕೊಡಗು ಜಿಲ್ಲಾ ಕಸಾಪ ವತಿಯಿಂದ ಅಭಿನಂಧಿಸುತ್ತಿರುವುದು. | Kannada Prabha

ಸಾರಾಂಶ

ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಿಸಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಭಾವಿ ಸಭೆ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಿಸಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಭಾವಿ ಸಭೆ ಖಾಸಗಿ ಹೋಟೆಲ್‌ ಸಭಾಂಗಣದಲ್ಲಿ ನಡೆಯಿತು.ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್.ಸಬಾಸ್ಟಿನ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವಕಾಮತ್ , ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಿ.ಎಂ.ಕೆ.ವಾಸು ರೈ, ಕುಶಾಲನಗರ ತಾಲೂಕು ಕಸಾಪದ ಸಂಘಟನಾ ಕಾರ್ಯದರ್ಶಿ ಗುಡ್ಡೆಮನೆ ಹರೀಶ್, ನಿರ್ದೇಶಕರಾದ ಬಿ.ಸಿ.ದಿನೇಶ್, ಕಸಾಪದ ಹಿರಿಯ ಸದಸ್ಯರಾದ ಲೀಲಾಮೇದಪ್ಪ, ಕೆ.ಪಿ.ಜಗನ್ನಾಥ್, ಸುಂಟಿಕೊಪ್ಪ ಹೋ.ಕಸಾಪ ನಿಕಟಪೂರ್ವ ಅಧ್ಯಕ್ಷ ವಹೀದ್‌ಜಾನ್ ಮತ್ತಿತರರು ಪಾಲ್ಗೊಂಡಿದ್ದರು. ಸಭೆಯಲ್ಲಿ ಸಮ್ಮೇಳನ ನಡೆಸುವ ಕುರಿತು ವಿಸ್ತ್ರತವಾದ ಚರ್ಚೆ ವಿವಿಧ ಉಪಸಮಿತಿಗಳ ರಚನೆ ಹಾಗೂ ಇನ್ನಿತರ ವಿಷಯ ಕುರಿತು ಚರ್ಚಿಸಲು ಮಾ.24 ರ ಮಂಗಳವಾರ ಪೂರ್ವಭಾವಿ ಸಭೆಯನ್ನು ಸುಂಟಿಕೊಪ್ಪ ಕೊಡವ ಸಮಾಜ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಕಸಾಪದ ಹಿರಿಯ ಸದಸ್ಯ ಬಿ.ಸಿ.ದಿನೇಶ್ ಅವರನ್ನು ಕೊಡಗು ಜಿಲ್ಲಾ ಕಸಾಪ ವತಿಯಿಂದ ಅಭಿನಂದಿಸಲಾಯಿತು.ಮೊದಲಿಗೆ ಸುಂಟಕೊಪ್ಪ ಹೋ.ಕಸಾಪ ಕಾರ್ಯದರ್ಶಿ ಕೆ.ಎಸ್.ಅನಿಲ್‌ಕುಮಾರ್ ಸ್ವಾಗತಿಸಿದರು. ಕೊಡಗು ಕಸಾಪದ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೊಡಗು ಕಸಾಪ ಅಧ್ಯಕ್ಷ ಎಂ.ಪಿ.ಕೇಶವಕಾಮತ್, ಜಿಲ್ಲಾ ಸಾಹಿತ್ಯ ಸಮ್ಮೇಳನದ ರೂಪುರೇಷೆಗಳ ವಿಸ್ತ್ರತವಾದ ಮಾಹಿತಿ ನೀಡಿದರು. ಕೊನೆಯಲ್ಲಿ ಪಿ.ಎಫ್.ಸಬಾಸ್ಟಿನ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಆಧಾರ್ ಸೀಡಿಂಗ್ - ಮ್ಯಾಪಿಂಗ್ ಕಡ್ಡಾಯ: ಶಶಿಧರ್ ಕೋಸಂಬೆ
ಎಸ್ಸೆಸ್ಸೆಲ್ಸಿ: ಕನ್ನಡ ಪರೀಕ್ಷೆ ಬರೆದ 254 ವಿದ್ಯಾರ್ಥಿಗಳು