ಕನ್ನಡಪ್ರಭ ವಾರ್ತೆ ಮೈಸೂರು
ವಿಜಯನಗರ ಒಂದನೇ ಹಂತದ ರೈಲ್ವೆ ಬಡಾವಣೆಯಲ್ಲಿರುವ ಕೊಡಗು ಗೌಡ ಸಮುದಾಯ ಭವನದಲ್ಲಿ ಹೆಬ್ಬಾಳಿನ ನವಭಾರತ್ ನಿರ್ಮಾಣ್ ಸೇವಾ ಟ್ರಸ್ಟ್ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು? ಎಂಬ ವಿಷಯದ ಮೇಲೆ ನಡೆದ ಶಿಕ್ಷಣ ಕ್ಷೇತ್ರದ ತಜ್ಞರಿಂದ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಜತೆಗೆ ಮುಂದೆ ಇಡಬೇಕಾದ ಹೆಜ್ಜೆಗಳ ಕುರಿತು ಜಾಗೃತಿ ಮೂಡಿಸಲು ಕಾರ್ಯಕ್ರಮ ಆಯೋಜಿಸಿದೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸುವ ಪೋಷಕರಿಗೆ ಶಿಕ್ಷಣ ಕ್ಷೇತ್ರದ ತಜ್ಞರಿಂದ ಸಲಹೆ ಕೊಡಿಸಿ ಉಜ್ವಲ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ನೆರವು ನೀಡಲಾಗುತ್ತದೆ ಎಂದು ಅವರು ಹೇಳಿದರು.ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ವಾಗ್ನಿಗಳೂ ಆದ ಪ್ರೊ. ನಾಗಣ್ಣ ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯದ ಜತೆಗೆ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕು. ಇದರಿಂದ ಮುಂದಿನ ಜೀವನದಲ್ಲಿ ಉತ್ತಮ ನೆಲೆ ಕಂಡುಕೊಳ್ಳಲು ಸಾಧ್ಯ. ಪೋಷಕರು, ಗುರು-ಹಿರಿಯರನ್ನು ಗೌರವದಿಂದ ಕಾಣುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಮಾರ್ಗದರ್ಶನ ನೀಡಿದರು.
ಕಾಂಗ್ರೆಸ್ ಮುಖಂಡ, ಅನಿಕೇತನ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ವಿ. ಮಲ್ಲೇಶ್ ಮಾತನಾಡಿದರು. ಅಧ್ಯಕ್ಷತೆಯನ್ನು ಕೊಡಗು ಗೌಡ ಸಮಾಜದ ಅಧ್ಯಕ್ಷ ಕೊಂಬಾರನ ಬಸಪ್ಪ ವಹಿಸಿದ್ದರು.