ಕನ್ನಡಪ್ರಭ ವಾರ್ತೆ ನಾಪೋಕ್ಲು
ಚೇರಂಬಾಣೆ ಗೌಡ ಸಮಾಜ ಮತ್ತು ಗೌಡ ಮಹಿಳಾ ಒಕ್ಕೂಟದ ವತಿಯಿಂದ ಸಮಾಜದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಬಳಿಕ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ವಿಭಿನ್ನ ಸಂಸ್ಕೃತಿ ಸಂಪ್ರದಾಯ ಉಳ್ಳ ಬಹು ಭಾಷಿಕರ ನೆಲೆವೀಡು. ದೇಶಕ್ಕೆ ಕೀರ್ತಿ ತಂದುಕೊಟ್ಟ ಸೈನಿಕರ ಕ್ರೀಡಾಳುಗಳ ತವರು. ಈ ಎಲ್ಲ ಕ್ಷೇತ್ರಗಳ ಸಾಧನೆಯೊಂದಿಗೆ ಅರೆಭಾಷಿಕ ಜನಾಂಗ ಇತ್ತೀಚಿನ ದಿನಗಳಲ್ಲಿ ಸಂಗೀತ, ನೃತ್ಯ, ನಾಟಕ, ಭರತನಾಟ್ಯ ಹೀಗೆ ಲಲಿತಕಲೆಗಳು ಮತ್ತು ಸಾಹಿತ್ಯದ ವಿವಿಧ ಸಾಧನಾ ಪಥಗಳಲ್ಲಿ ದಿಟ್ಟ ಹೆಜ್ಜೆ ಇಡುತ್ತಿರುವುದು ಆಶಾದಾಯಕ ಬೆಳವಣಿಗೆ. ಇದು ಜನಾಂಗದ ಸರ್ವಾಂಗೀಣ ಪ್ರಗತಿಯ ಪ್ರತೀಕ ಎಂದು ಸಂಪಾಜೆ ನುಡಿದರು. ಬಾನುಲಿಯಲ್ಲಿ ಬಿತ್ತರಗೊಳ್ಳುವ ಭಕ್ತಿಗೀತೆಗಳು, ಸುಪ್ರಭಾತ, ವೈವಿಧ್ಯಮಯ ಕಾರ್ಯಕ್ರಮಗಳು ಹಿರಿಯರ ಮುಂದಾಲೋಚನೆಯಿಂದ ಸಾಧ್ಯವಾಯ್ತು. ಅಕಾಡೆಮಿಯ ಪಾತ್ರ ಗುರುತರವಾದುದು. ಮಹಿಳಾ ಸಂಘಟನೆಗಳ ಕ್ರಿಯಾಶೀಲತೆಯಂತೂ ಗಮನಾರ್ಹ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಉಪನ್ಯಾಸಕ ಕೂಡಕಂಡಿ ಎಂ.ನಂಜುಂಡ ಅವರು, "ಯಾವುದೇ ಸಮುದಾಯದ ಬೆಳವಣಿಗೆಯಲ್ಲಿ ಮಾಧ್ಯಮಗಳ ಪಾತ್ರ ಮುಖ್ಯವಾದುದು. ಈ ಗುಟ್ಟನ್ನರಿತು ಅರೆಭಾಷಿಕ ಜನಾಂಗ ತಮ್ಮ ಸರ್ವಾಂಗೀಣ ಏಳಿಗೆಯತ್ತ ಇನ್ನಷ್ಟು ಗಮನಹರಿಸಬೇಕು. ರೇಡಿಯೋ ಕಾರ್ಯಕ್ರಮಗಳು ಮನೆ ಮನೆ ತಲುಪಿವೆ. ಈ ಕೆಲಸ ಇನ್ನಷ್ಟು ಚುರುಕಾಗಬೇಕು ಎಂದರು.
ಇದಕ್ಕೂ ಮೊದಲು ಪೂರ್ಣಕುಂಭ ಸ್ವಾಗತ ನೀಡಿ ಸಾಂಪ್ರದಾಯಿಕವಾಗಿ ಸುಬ್ರಾಯ ಸಂಪಾಜೆ ದಂಪತಿಯನ್ನು ಬರಮಾಡಿಕೊಂಡು ಸಮುದಾಯದ ವತಿಯಿಂದ ಬಾನುಲಿ ಸೇವೆಗಾಗಿ ಅವರನ್ನು ಸನ್ಮಾನಿಸಲಾಯಿತು.
ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಚೇರಂಬಾಣೆ ಗೌಡ ಸಮಾಜದ ಉಪಾಧ್ಯಕ್ಷ ಕೇಕಡ ದಿನೇಶ್ ಇದ್ದರು.
ಬೈಮನ ಜ್ಯೋತಿ ತಿಮ್ಮಯ್ಯ ಹಾಡಿನೊಂದಿಗೆ ಪ್ರಾರ್ಥಿಸಿದ ಕಾರ್ಯಕ್ರಮವನ್ನು ಬೆಳ್ಯನ ಚಂದ್ರಪ್ರಕಾಶ್ ಸ್ವಾಗತಿಸಿದರು. ಕೇಕಡ ಪೂಜಾ ನಾಗೇಂದ್ರ ಕಾರ್ಯಕ್ರಮ ನಿರೂಪಿಸಿ ಅಣ್ಣೆಚ್ಚಿ ಬೋಜಮ್ಮ ಕುಶಾಲಪ್ಪ ವಂದಿಸಿದರು.