ಡಿ. 4 ರಂದು ಕೊಡಗಿನ ಹುತ್ತರಿ ಹಬ್ಬ

KannadaprabhaNewsNetwork |  
Published : Nov 20, 2025, 01:30 AM IST
ಉಪಸ್ಥಿತರಿದ್ದರು | Kannada Prabha

ಸಾರಾಂಶ

ಧಾನ್ಯಲಕ್ಷ್ಮೀಯನ್ನು ಬರಮಾಡಿಕೊಳ್ಳುವ ಕೊಡಗಿನ ಹುತ್ತರಿ ಹಬ್ಬ ಡಿ. 4ರಂದು ಆಚರಿಸುವಂತೆ ನಿರ್ಧರಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಧಾನ್ಯಲಕ್ಷ್ಮಿಯನ್ನು ಬರಮಾಡಿಕೊಳ್ಳುವ ಕೊಡಗಿನ ಹುತ್ತರಿ ಹಬ್ಬವನ್ನು ಡಿಸೆಂಬರ್ 4 ರಂದು ಗುರುವಾರ ಆಚರಿಸುವಂತೆ ನಿರ್ಧರಿಸಲಾಯಿತು.

ಇಲ್ಲಿಗೆ ಸಮೀಪದ ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಬುಧವಾರ ಜ್ಯೋತಿಷ್ಯದ ಪ್ರಕಾರ ದಿನ ನಿಗದಿ ಮಾಡಲಾಯಿತು.ಕಕ್ಕಬೆ - ಕುಂಜಿಲ ಗ್ರಾಮ ಪಂಚಾಯಿತಿಯ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವಾಲಯದ ತಕ್ಕ ಮುಖ್ಯಸ್ಥರು, ವ್ಯವಸ್ಥಾಪನಾ ಸಮಿತಿ ಪ್ರಮುಖರ ಹಾಗೂ ಭಕ್ತರ ಸಮ್ಮುಖದಲ್ಲಿ ಅಮ್ಮಂಗೆರಿ ಜ್ಯೋತಿಷಿ ಶಶಿಕುಮಾರ್ ಜ್ಯೋತಿಷ್ಯದ ಪ್ರಕಾರ ರಾಶಿ ಫಲ ಪರಿಶೀಲಿಸಿ ದಿನ ನಿಗದಿ ಮಾಡಿದರು.ಅದರಂತೆ ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ಡಿಸೆಂಬರ್ 4 ರಂದು ಗುರುವಾರ ರೋಹಿಣಿ ನಕ್ಷತ್ರದ ಹುಣ್ಣಿಮೆಯ ದಿನ ಹುತ್ತರಿ ಹಬ್ಬ ಆಚರಣೆ. ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು, ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು. ಅನ್ನಪ್ರಸಾದಕ್ಕೆ 10.10 ಗಂಟೆಗೆ ಮುಹೂರ್ತ ನಿಗದಿಪಡಿಸಲಾಯಿತು.ಸಾರ್ವಜನಿಕರಿಗೆ ರಾತ್ರಿ 8.40 ಗಂಟೆಗೆ ನೆರೆ ಕಟ್ಟುವುದು, ರಾತ್ರಿ 9.40 ಗಂಟೆಗೆ ಕದಿರು ತೆಗೆಯುವುದು, ಭೋಜನಕ್ಕೆ ರಾತ್ರಿ 10.40 ಗಂಟೆಗೆ ಮುಹೂರ್ತ ನಿಗದಿಪಡಿಸಲಾಯಿತು.ಇದಕ್ಕೂ ಮುನ್ನ ಡಿಸೆಂಬರ್ 4 ರಂದು ಗುರುವಾರ ಹಗಲು ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕಲ್ಲಾಡ್ಚ ಹಬ್ಬ ನಡೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ದಿಂದ ಹಬ್ಬದವರೆಗೆ ದೇವರ ಕಟ್ಟು ವಿಧಿಸಲಾಗಿದ್ದು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ನಿಯಮ ಪಾಲನೆ ಮಾಡುವಂತೆ ವಿನಂತಿಸಿಕೊಳ್ಳಲಾಯಿತು.ಈ ಸಂದರ್ಭ ದೇವಾಲಯದ ಅಭಿವೃದ್ಧಿ ಕಾರ್ಯ, ಬ್ರಹ್ಮ ಕಲಶೋತ್ಸವ ಹಾಗೂ ಪೂಜಾ ವಿಧಿಗಳ ಬಗ್ಗೆ ಕೇಳಿ ಬಂದ ಪ್ರಶ್ನೆಗಳಿಗೆ ಜ್ಯೋತಿಷ್ಯದ ಪ್ರಕಾರ ಸೂಕ್ತ ಉತ್ತರವನ್ನು ಪಡೆದುಕೊಳ್ಳಲಾಯಿತು.ನಂತರ ಅಖಿಲ ಕೊಡವ ಸಮಾಜದ ಅಧ್ಯಕ್ಷರು, ದೇವತಕ್ಕರೂ ಆಗಿರುವ ಪರದಂಡ ಸುಬ್ರಮಣಿ ಕಾವೇರಪ್ಪ, ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿ ಮಾಹಿತಿ ನೀಡಿ ಪುತ್ತರಿ ಹಬ್ಬದ ಆಚರಣೆ ಹಿರಿಯರ ಕಾಲದಿಂದ ಆಚರಿಸಿಕೊಂಡು ಬಂದ ಆಚರಣೆಯನ್ನು ಯಥಾವತ್ತಾಗಿ ಪಾಲಿಸಿ. ಧಾನ್ಯ ಲಕ್ಷ್ಮಿಯನ್ನು ಮನೆಗೆ ಕರೆತರುವ ಹಬ್ಬವನ್ನು ಎಲ್ಲರೂ ನಿಗದಿ ಪಡಿಸಿದ ಸಮಯದಲ್ಲೇ ಆಚರಿಸುವಂತಾಗಬೇಕು. ದೇಶಕಟ್ಟನ್ನು ಎಲ್ಲರೂ ಪಾಲಿಸಬೇಕು ಎಂದರು.ಜ್ಯೋತಿಷ್ಯ ಶಶಿಕುಮಾರ್ , ಕಣಿಯರ ನಾಣಯ್ಯ ಕುಟುಂಬದವರು ಜ್ಯೋತಿಷ್ಯದ ಪ್ರಕಾರ ರಾಶಿ ಫಲ ಪರಿಶೀಲಿಸಿ ದಿನ ನಿಗದಿ ಮಾಡಿದ ಬಳಿಕ ದೇವತಕ್ಕರಾದ ಪರದಂಡ ಸುಬ್ರಮಣಿ ಕಾವೇರಪ್ಪ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಆನಂತರ ದಿನ ನಿಗದಿ ಪಟ್ಟಿಗೆ ವಿಶೇಷ ಪ್ರಾರ್ಥನೆಯ ಮೂಲಕ ಅರ್ಚಕರಿಗೆ ನೀಡಿ ಅರ್ಚಕ ಜಗದೀಶ್ ಅವರು ಪೂಜೆ ನೆರವೇರಿಸಿದ ಬಳಿಕ ತೀರ್ಥ ಪ್ರಸಾದ ನೀಡುವುದರ ಮೂಲಕ ತಕ್ಕ ಮುಖ್ಯಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಅಧಿಕಾರಿ ರವಿಕುಮಾರ್, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಾಚಮಂಡ ರಾಜ ಪುವಣ್ಣ, ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು, ಸಿಬ್ಬಂದಿ, ಪ್ರಮುಖರಾದ ಕಲ್ಯಾಟಂಡ ಮುತ್ತಪ್ಪ, ಕಾಂಡ ಜೋಯಪ್ಪ, ಪಾಂಡಂಡ ನರೇಶ್ , ತಕ್ಕ ಮುಖ್ಯಸ್ಥರು ಹಾಗೂ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸನದಲ್ಲಿಂದು ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ
ಅಧಿಕಾರಶಾಹಿ ನಿರ್ಲಕ್ಷ್ಯದ ವಿರುದ್ಧ ಹೋರಾಟ ಶುರು