ಸುಂಟಿಕೊಪ್ಪ : ರಾಜ್ಯದ್ಯಂತ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಕೊಡಗು ಜಿಲ್ಲೆಯಲ್ಲಿ ಇರ್ವರು ವಿದ್ಯಾರ್ಥಿನಿಯರು 625 ಅಂಕಗಳಿಗೆ 621 ಅಂಕ ಗಳಿಸುವ ಮೂಲಕ ಪ್ರಥಮ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿಯ ಶಾಂತಿನಿಕೇತನ ಪ್ರೌಢಶಾಲೆ ವಿದ್ಯಾರ್ಥಿನಿ ಸಿಂಚನ ಕೆ.ಐ 621 ಅಂಕ ಪಡೆದಿದ್ದಾರೆ. ಇದೇ ಶಾಲೆಯ ರೇನಿತ್ 617 ಅಂಕಗಳಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಸಾಧಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆ ಹತ್ತನೇ ತರಗತಿಯಲ್ಲಿ ಶೇ. 43 ಮಂದಿ ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, 41 ಮಂದಿ ಉತ್ತೀರ್ಣರಾಗಿದ್ದಾರೆ. ಉನ್ನತ ಶ್ರೇಣಿಯಲ್ಲಿ 7 ಮಂದಿ ಉತ್ತೀರ್ಣರಾಗಿದ್ದು, ಪ್ರಥಮ ಶ್ರೇಣಿಯಲ್ಲಿ 26 ಮಂದಿ, ದ್ವಿತೀಯ ಶ್ರೇಣಿಯಲ್ಲಿ 07 ಮಂದಿ ತೃತೀಯ ಶ್ರೇಣಿಯಲ್ಲಿ 1 ಉತ್ತೀರ್ಣರಾಗಿದ್ದು ಒಟ್ಟು 41 ಮಕ್ಕಳು ಉತ್ತೀರ್ಣರಾಗುವುದರೊಂದಿಗೆ ಶೇ. 95.34 ಪಡೆದುಕೊಂಡಿತು. ಈ ಪೈಕಿ 599 ಅಂಕಗಳಿಸುವ ಶ್ರೀಶಾ ಶೇಕಡ 95.84 ರ ಸಾಧನೆಯನ್ನು ಮಾಡಿದ್ದಾರೆ. ಶ್ರೀಶಾ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಾಕಷ್ಟು ಸಾಧನೆಯನ್ನು ಮಾಡಿರುವುದು ಸ್ಮರಿಸಬಹುದಾಗಿದೆ. ಸುಂಟಿಕೊಪ್ಪದ ಸರಕಾರಿ ಪ್ರೌಢಶಾಲೆಯಲ್ಲಿ 33 ಮಂದಿ ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, 33 ಮಕ್ಕಳು ಉತ್ತೀರ್ಣಗೊಳ್ಳುವುದರೊಂದಿಗೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಉನ್ನತ ಶ್ರೇಣಿಯಲ್ಲಿ 3 ಮಂದಿ, ಪ್ರಥಮ ಶ್ರೇಣಿಯಲ್ಲಿ 12 ಮಂದಿ, ದ್ವಿತೀಯ ಶ್ರೇಣಿಯಲ್ಲಿ 13 ಮಂದಿ, ತೃತೀಯ ಶ್ರೇಣಿಯಲ್ಲಿ 5 ಉತ್ತೀರ್ಣಗೊಂಡಿದ್ದಾರೆ. ರೋಜ 559 ಅಂಕಗಳಿಸುವುದರೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ದ್ವಿತೀಯ ಸ್ಥಾನವನ್ನು ವೈಷ್ಣವಿ 536 ಅಂಕವನ್ನುಗಳಿಸಿಕೊಂಡರೆ, ತೃತೀಯ ಸ್ಥಾನವನ್ನು ಮೊಹಮದ್ ಅನಾಸ್ 533 ಅಂಕಗಳನ್ನು ಪಡೆಯುವ ಶಾಲೆಗೆ ಉತ್ತಮ ಸಾಧನೆ ತೋರಿದ್ದಾರೆ. 7ನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆ ಹತ್ತನೇ ತರಗತಿಯಲ್ಲಿ 24 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 24 ಉತ್ತೀರ್ಣಗೊಂಡಿದ್ದು, ಉನ್ನತ ಶ್ರೇಣಿಯಲ್ಲಿ ಓರ್ವ ವಿದ್ಯಾರ್ಥಿನಿ, ಪ್ರಥಮ ಶ್ರೇಣಿಯಲ್ಲಿ 15 ಮಂದಿ ದ್ವಿತೀಯ ಶ್ರೇಣಿಯಲ್ಲಿ 5 ಮಂದಿ ಹಾಗೂ ತೃತೀಯ ಶ್ರೇಣಿಯಲ್ಲಿ 3 ಉತ್ತೀರ್ಣಗೊಂಡಿದ್ದಾರೆ. ಶೇ. 100 ಫಲಿತಾಂಶ ಪಡೆದುಕೊಂಡಿದೆ.ಕಾನ್ಬೈಲ್ ಸರ್ಕಾರಿ ಪ್ರೌಢಶಾಲೆ ಹತ್ತನೇ ತರಗತಿಯಲ್ಲಿ 5 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ದಾಖಲಿಸಿದ್ದಾರೆ.