‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’: ಕೊಡವ ವಾರಿಯರ್ಸ್‌ಗೆ ಏಳು ವಿಕೆಟ್‌ಗಳ ಜಯ

KannadaprabhaNewsNetwork |  
Published : May 08, 2024, 01:03 AM IST
ಚಿತ್ರ : 7ಎಂಡಿಕೆ5 : ಕೊಡವ ವಾರಿಯರ್ಸ್ ನ ಸಂಜಯ್ ಎಂ.ಎಂ   ಪಂದ್ಯ ಪುರುಷೋತ್ತಮ ಪ್ರಶಸ್ತಿ ಗಳಿಸಿದರು.  | Kannada Prabha

ಸಾರಾಂಶ

ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ ಪಂದ್ಯಾವಳಿಯ ಮಂಗಳವಾರದ ಮೊದಲ ಪಂದ್ಯದಲ್ಲಿ ಕೊಡವ ವಾರಿಯರ್ಸ್ ತಂಡ ಪ್ರಗತಿ ಕ್ರಿಕೆಟರ್ಸ್ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೂರ್ಗ್ ಕ್ರಿಕೆಟ್ ಫೌಂಡೇಷನ್ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೆದರ್ ಬಾಲ್ ‘ಕೊಡವ ಕ್ರಿಕೆಟ್ ಪ್ರೀಮಿಯರ್ ಲೀಗ್’ ಪಂದ್ಯಾವಳಿಯ ಮಂಗಳವಾರದ ಮೊದಲ ಪಂದ್ಯದಲ್ಲಿ ಕೊಡವ ವಾರಿಯರ್ಸ್ ತಂಡ ಪ್ರಗತಿ ಕ್ರಿಕೆಟರ್ಸ್ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದೆ.ಟಾಸ್ ಗೆದ್ದ ಕೊಡವ ವಾರಿಯರ್ಸ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪ್ರಗತಿ ಕ್ರಿಕೆಟರ್ಸ್ ತಂಡ 20 ಓವರ್ ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 113 ರನ್ ಸೇರಿಸಿತು.

ಇದನ್ನು ಬೆನ್ನಟ್ಟಿದ ಕೊಡವ ವಾರಿಯರ್ಸ್ 15.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 114 ರನ್ ಗಳಿಸಿ ಗೆಲವು ದಾಖಲಿಸಿತು.

ಕೊಡವ ವಾರಿಯರ್ಸ್ ನ ಸಂಜಯ್ ಎಂ.ಎಂ 28 ಬಾಲ್ ಗಳಲ್ಲಿ 30 ರನ್ ಗಳನ್ನು ಗಳಿಸಿ, 14 ರನ್ ಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಪಂದ್ಯ ಪುರುಷೋತ್ತಮ ಪ್ರಶಸ್ತಿ ಗಳಿಸಿದರು.

ಎರಡನೇ ಪಂದ್ಯದಲ್ಲಿ ಕೂರ್ಗ್ ಬ್ಲಾಸ್ಟರ್ಸ್ ತಂಡ ಟೀಮ್ ವೈಲ್ಡ್ ಫ್ಲವರ್ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ.

ಟಾಸ್ ಗೆದ್ದ ಕೂರ್ಗ್ ಬ್ಲಾಸ್ಟರ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ವೈಲ್ಡ್ ಫ್ಲವರ್ ತಂಡ 15 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 86 ರನ್ ಗಳಿಸಿತು.

ಕೂರ್ಗ್ ಬ್ಲಾಸ್ಟರ್ಸ್ ತಂಡ 13 ಓವರ್ ಗಳಲ್ಲಿ 5 ವಿಕೆಟ್ ಗಳನ್ನು ಕಳೆದುಕೊಂಡು 87 ರನ್ ಗಳನ್ನು ದಾಖಲಿಸಿ ವಿಜಯ ಸಾಧಿಸಿತು.

ಕೂರ್ಗ್ ಬ್ಲಾಸ್ಟರ್ಸ್ ತಂದ ನಿಖಿಲ್ ಬೋಪಯ್ಯ ಪಂದ್ಯ ಪುರುಷೋತ್ತಮ ಪ್ರಶಸ್ತಿ ಗಳಿಸಿದರು. -------------- ಇಂದಿನ ಪಂದ್ಯ -ಪಂದ್ಯ -1 (ಬೆಳಗ್ಗೆ 8.30ಕ್ಕೆ): ಟೀಮ್ ಲೆವರೇಜ್ / ಪ್ರಗತಿ ಕ್ರಿಕೆಟರ್ಸ್

-ಪಂದ್ಯ -2 (ಅಪರಾಹ್ನ 1.30ಕ್ಕೆ) ಅಂಜಿಗೇರಿ ನಾಡ್ / ರಾಯಲ್ ಟೈಗರ್ಸ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನಂದಪುರ : ಮರದ ರಂಬೆ ಮರ್ಮಾಂಗಕ್ಕೆ ತಗುಲಿ ವ್ಯಕ್ತಿ ಸಾವು
ಅಪಘಾತದಿಂದ ಕೆಲ್ಸ ಕಳ್ಕೊಂಡ ಮಹಿಳೆ ನೆರವಿಗೆ ಕೋರ್ಟ್‌