ಕೊಡವ ಜನಸಂಖ್ಯೆ ವೃದ್ಧಿ ಅಗತ್ಯ: ಬಾದುಮಂಡ ಚಿಮ್ಮ ಉತ್ತಯ್ಯ

KannadaprabhaNewsNetwork |  
Published : Oct 25, 2025, 01:00 AM IST

ಸಾರಾಂಶ

ಜನಸಂಖ್ಯೆ ಹೆಚ್ಚಾದಷ್ಟೂ ನಮ್ಮ ಸಂಸ್ಕೃತಿ ಬಲಗೊಳ್ಳುತ್ತದೆ. ಸಮಾಜದಲ್ಲಿ ಹೆಚ್ಚಿನ ಸ್ಥಾನಮಾನ ಪಡೆದುಕೊಳ್ಳಲು ಸಹಕಾರವಾಗುತ್ತದೆ. ನಮ್ಮ ಜನಾಂಗದ ಮುಂದಿನ ಭವಿಷ್ಯವನ್ನು ಮನಸಿನಲ್ಲಿಟ್ಟುಕೊಂಡು ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ಮನಸ್ಸು ಮಾಡಬೇಕು ಎಂದು ಬಾದುಮಂಡ ಚಿಮ್ಮ ಉತ್ತಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಶ್ರೀಮಂಗಲ

ನಮ್ಮ ಪೂರ್ವಜರು ಯಾವುದೇ ಸೌಕರ್ಯವಿಲ್ಲದೆ ಅತೀ ಕಷ್ಟದ ಜೀವನ ನಡೆಸುತ್ತಿದ್ದ ಕಾಲದಲ್ಲಿಯೇ ಕೊಡವರು ಎಂಟು ಹತ್ತು ಮಕ್ಕಳನ್ನು ಹೊತ್ತು, ಹೆತ್ತು, ಸಾಕಿ ಒಳ್ಳೆಯ ಬದುಕು ಕಟ್ಟಿಕೊಟ್ಟಿದ್ದಾರೆ. ಆದರೆ ಇಂದು ಎಲ್ಲ ಸೌಕರ್ಯಗಳಿದ್ದರೂ ಸಾಕಲು ಸಾಧ್ಯವಿಲ್ಲವೆಂಬ ಸುಳ್ಳು ನೆಪ ಹೇಳುತ್ತಾ ದಂಪತಿ ಒಂದು ಮಗುವಿಗೆ ಸೀಮಿತಗೊಳಿಸುತ್ತಿರುವುದು ಕೊಡವರ ಮಟ್ಟಿಗೆ ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಬಾದುಮಂಡ ಚಿಮ್ಮ ಉತ್ತಯ್ಯ ಹೇಳಿದರು.ಟಿ. ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ನಡೆಯುತ್ತಿರುವ 9ನೇ ವರ್ಷದ ಚಂಗ್ರಾಂದಿ ಪತ್ತಲೋದಿ 6ನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಜನಸಂಖ್ಯೆ ಹೆಚ್ಚಾದಷ್ಟೂ ನಮ್ಮ ಸಂಸ್ಕೃತಿ ಬಲಗೊಳ್ಳುತ್ತದೆ. ಸಮಾಜದಲ್ಲಿ ಹೆಚ್ಚಿನ ಸ್ಥಾನಮಾನ ಪಡೆದುಕೊಳ್ಳಲು ಸಹಕಾರವಾಗುತ್ತದೆ. ನಮ್ಮ ಜನಾಂಗದ ಮುಂದಿನ ಭವಿಷ್ಯವನ್ನು ಮನಸಿನಲ್ಲಿಟ್ಟುಕೊಂಡು ಮಕ್ಕಳ ಸಂಖ್ಯೆಯನ್ನು ವೃದ್ಧಿಸಲು ಮನಸ್ಸು ಮಾಡಬೇಕು ಎಂದರು.ಮತ್ತೋರ್ವ ಅತಿಥಿ ಮುಕ್ಕಾಟಿರ ವಾಣಿ ವಾಸು ಮಾತನಾಡಿ, ಚಂಗ್ರಾಂದಿ ಪತ್ತಲೋದಿಯ ಹೆಸರಿನಲ್ಲಿ ಸೃಷ್ಠಿ ಮಾಡಿದ ಈ ಸಾಂಸ್ಕೃತಿಕ ವೇದಿಕೆಯನ್ನು ಎಲ್ಲರೂ ಉತ್ತಮವಾಗಿ ಬಳಸಿಕೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವಂತಾಗಬೇಕು. ಕೊಡವ ಭಾಷೆಯನ್ನು ಉಳಿಸಿ ಬೆಳೆಸುವ ಸಲುವಾಗಿ ಪೋಷಕರು ಮಕ್ಕಳೊಂದಿಗೆ ಕೊಡವ ಭಾಷೆಯಲ್ಲೇ ಮಾತನಾಡಬೇಕು ಎಂದು ಹೇಳಿದರು.ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜದ ಅಧ್ಯಕ್ಷ ಕೈಬಿಲೀರ ಹರೀಶ್ ಅಪ್ಪಯ್ಯ ಹಾಗೂ ಉಪಾಧ್ಯಕ್ಷ ಮಚ್ಚಮಾಡ ಸುಮಂತ್, ಕೊಡವ ಸಮಾಜ ಕೊಡವ ಜನಾಂಗ ಹಾಗೂ ಸಂಸ್ಕೃತಿಯ ಬೆಳವಣಿಗೆಗೆ ಕೈಗೊಂಡಿರುವ ಕಾರ್ಯ ಚಟುವಟಿಕೆಗಳ ಮಾಹಿತಿಯನ್ನು ಸಭೆಗೆ ನೀಡಿದರು.ವೇದಿಕೆಯಲ್ಲಿ ಉಪಸ್ಥಿತರಿದ್ದ ಮತ್ತೋರ್ವ ಅತಿಥಿ ಚೆಟ್ಟಂಗಡ ಗ್‌ಣಿ ಕಾರ್ಯಪ್ಪ, ಪತ್ತಲೋದಿ ಶುಭ ಹಾರೈಸಿದರು.ಈ ಸಂದರ್ಭ ದಾನಿಗಳಾದ ಬಾದುಮಂಡ ಚಿಮ್ಮ ಉತ್ತಯ್ಯ ಅವರನ್ನು ಟಿ.ಶೆಟ್ಟಿಗೇರಿ ಕೊಡವ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಚೆಟ್ಟಂಗಡ ಕುಟುಂಬದ ಮಹಿಳೆಯರ ‘ಬದ್‌ಕ್‌ರ ಪಾಟ’ ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಪ್ರದರ್ಶನ ಹಾಗೂ ಆಂಗೋಡ್ ಕೇರಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಜನರ ಮನ ಗೆಲುವಲ್ಲಿ ಯಶಸ್ವಿಯಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!