ಕೊಡವರು ಅಂದ್ರೆ ಹಾಕಿ, ಹಾಕಿ ಅಂದ್ರೆ ಕೊಡವರು: ಸಿಎಂ ವರ್ಣನೆ

KannadaprabhaNewsNetwork |  
Published : Nov 03, 2025, 02:45 AM IST
ಗೃಹ ಕಚೇರಿ ಕೃಷ್ಣದಲ್ಲಿ ‘ಚೆನ್ನಡ ಹಾಕಿ ಪಂದ್ಯಾವಳಿ’ಯ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ | Kannada Prabha

ಸಾರಾಂಶ

ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರು. ಅನುದಾನ ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡವರು ಅಂದ್ರೆ ಹಾಕಿ, ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಗೃಹ ಕಚೇರಿ ಕೃಷ್ಣದಲ್ಲಿ ‘ಚೆನ್ನಡ ಹಾಕಿ ಪಂದ್ಯಾವಳಿ’ಯ ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯಾ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು. ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು. ಮುಂದಿನ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಭರವಸೆ ನೀಡಿದರು. ಶಾಸಕ ಪೊನ್ನಣ್ಣ ಮತ್ತು ಸಚಿವರಾದ ಭೋಸರಾಜು, ಭೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ ಸೇರಿ ಕೊಡವ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ