ಕೊಡವೂರು ನೃತ್ಯ ನಿಕೇತನ ‘ನೃತ್ಯ ಶಂಕರ’ ಸರಣಿಗೆ ಶತ ಸಂಭ್ರಮ

KannadaprabhaNewsNetwork |  
Published : Jun 12, 2025, 12:58 AM ISTUpdated : Jun 12, 2025, 12:59 AM IST
11ನೃತ್ಯಶಂಕರ | Kannada Prabha

ಸಾರಾಂಶ

ಕೊಡವೂರು ಶ್ರೀ ಶಂಕರನಾರಾಯಣ ದೇವಳ ಹಾಗೂ ನೃತ್ಯ ನಿಕೇತನ ಕೊಡವೂರು ಜಂಟಿಯಾಗಿ ಆಯೋಜಿಸಿದ್ದ ನೃತ್ಯ ಶಂಕರ ನಾಟ್ಯ ಸರಣಿಯ 100ನೇ ಪ್ರಸ್ತುತಿ ಇತ್ತೀಚೆಗೆ ನೆರವೇರಿತು.

ಕನ್ನಡಪ್ರಭ ವಾರ್ತೆ ಉಡುಪಿ

ಶ್ರದ್ಧೆ, ಬದ್ಧತೆಯಿಂದ ಶ್ರೇಷ್ಠತೆ ಪಡೆದುಕೊಂಡ ನೃತ್ಯನಿಕೇತನ ಕೊಡವೂರು ಸಂಸ್ಥೆ ಹಲವಾರು ನೃತ್ಯ ವಿದ್ಯಾರ್ಥಿಗಳೊಂದಿಗೆ, ನೃತ್ಯ ಗುರುಗಳನ್ನೂ ಸೃಷ್ಟಿಸಿ ನಮ್ಮ ನಾಡಿನ ಸಾಂಸ್ಕೃತಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದೆ ಎಂದು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊಡವೂರು ಶ್ರೀ ಶಂಕರನಾರಾಯಣ ದೇವಳ ಹಾಗೂ ನೃತ್ಯ ನಿಕೇತನ ಕೊಡವೂರು ಜಂಟಿಯಾಗಿ ಆಯೋಜಿಸಿದ್ದ ನೃತ್ಯ ಶಂಕರ ನಾಟ್ಯ ಸರಣಿಯ 100ನೇ ಪ್ರಸ್ತುತಿಯ ಸಂದರ್ಭದಲ್ಲಿ ಮುಖ್ಯ ಅತಿಥಿಯ ನೆಲೆಯಲ್ಲಿ ಮಾತನಾಡಿದ ಅವರು, ಕಲೆ ಯಾವತ್ತೂ ಕಲಿಕೆಗೆ ಪೂರಕವಾಗಿದ್ದು, ಅದು ಎಂದಿಗೂ ಶಿಕ್ಷಣಕ್ಕೆ ಮಾರಕವಾಗಿರಲು ಸಾಧ್ಯವಿಲ್ಲ ಎಂದರು.ನೃತ್ಯ ನಿಕೇತನ ಸಂಸ್ಥೆಯ ನಿರ್ದೇಶಕ ವಿದ್ವಾನ್ ಸುಧೀರ್ ರಾವ್ ಸ್ವಾಗತಿಸಿ ಪ್ರಸ್ತಾಪಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಅಭಿನಂದನಾ ಮಾತುಗಳನ್ನಾಡಿದರು. ಉದ್ಯಮಿಗಳಾದ ಸಾಧು ಸಾಲಿಯಾನ್, ಕಲಾ ಪೋಷಕರಾದ ವಿಶ್ವನಾಥ ಶೆಣೈ, ರಂಗ ಕಲಾವಿದ ಎಂ. ಶ್ರೀನಿವಾಸ್ ಭಟ್ ಶುಭ ಹಾರೈಸಿದರು.ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರಾಜ ಸೇರಿಗಾರ, ಭಾಸ್ಕರ ಪಾಲನ್, ಯಶೋಧರ ಸಾಲಿಯಾನ್, ಕೆ. ಬಾಬಾ ಉಪಸ್ಥಿತರಿದ್ದರು. ನೃತ್ಯ ನಿಕೇತನ ಸಂಸ್ಥೆಯ ನಿರ್ದೇಶಕಿ ಮಾನಸಿ ಸುಧೀರ್ ಕೃತಜ್ಞತೆಯ ಮಾತುಗಳನ್ನಾಡಿದರು. ಮಧುಶ್ರೀ ಪ್ರಾರ್ಥಿಸಿದರು.ಕಲಾ ದಂಪತಿಯನ್ನು ಶ್ರೀ ದೇವಳದ ವತಿಯಿಂದ ‘ಶಂಕರನಾರಾಯಣಾನುಗ್ರಹ’ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಪೂರ್ಣಿಮಾ ಜನಾರ್ದನ ನಿರೂಪಿಸಿದರು. ಜನಾರ್ದನ ಕೊಡವೂರು ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ನೃತ್ಯ ಶಂಕರ ಸರಣಿಯ ನೂರನೇ ಪ್ರಸ್ತುತಿ ಸಂಪನ್ನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ