ಉಡುಪಿ: ಕೋಡಿಬೇಂಗ್ರೆ ಅಳಿವೆಬಾಗಿಲು ಬಳಿ ಸ್ವರ್ಣ ನದಿಯಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಧಿತರನ್ನು ಸುಹಾಸ್ ಶ್ರೀಯಾನ್ (23), ಸುಫಿಯಾನ್ (20), ವಾಸು ಮೆಂಡನ್ (52) ಎಂದು ಗುರುತಿಸಲಾಗಿದೆ. ಜ. 26ರಂದು ಆರೋಪಿಗಳು ಪರವಾನಿಗೆ ಇಲ್ಲದೆ ಪ್ರವಾಸಿಗರನ್ನು ದೋಣಿ ವಿಹಾರಕ್ಕೆ ಕಳುಹಿಸಿದ್ದಲ್ಲದೇ, ಲೈಫ್ ಜಾಕೆಟ್ಗಳಿಲ್ಲದೆ ದೋಣಿ ಸಂಚಾರ ನಡೆಸಿದ್ದರಿಂದ ದುರಂತ ಸಂಭವಿಸಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಅಂದು ದೋಣಿಯನ್ನು ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿದ್ದ ಪರಿಣಾಮ ದೋಣಿ ಮಗುಚಿ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.