ಕೋಗಿಲು: 25 ಮಂದಿಗಷ್ಟೇ ಇಂದು ಅದೃಷ್ಟದ ಬಾಗಿಲು

KannadaprabhaNewsNetwork |  
Published : Jan 09, 2026, 02:00 AM ISTUpdated : Jan 09, 2026, 06:55 AM IST
bengaluru Kogilu Layout

ಸಾರಾಂಶ

ಯಲಹಂಕದ ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನೆಲೆಸಿದ 167 ಕುಟುಂಬಗಳ ಪೈಕಿ 25 ಕುಟುಂಬಕ್ಕೆ ಶುಕ್ರವಾರ ವಸತಿ ಇಲಾಖೆಯಿಂದ ಹಕ್ಕುಪತ್ರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋಗಿಲು ಅಕ್ರಮ ನಿವಾಸಿ ಪ್ರಕರಣಗಳಿಗೆ ಸಂಬಂಧಿಸಿ 25 ಕುಟುಂಬಕ್ಕೆ ವಸತಿ ಇಲಾಖೆಯಿಂದ ಹಕ್ಕುಪತ್ರ ವಿತರಣೆಗೆ ತೀರ್ಮಾನಿಸಲಾಗಿದೆ

  ಬೆಂಗಳೂರು :  ಯಲಹಂಕದ ಕೋಗಿಲು ಲೇಔಟ್‌ನಲ್ಲಿ ಅಕ್ರಮವಾಗಿ ನೆಲೆಸಿದ 167 ಕುಟುಂಬಗಳ ಪೈಕಿ 25 ಕುಟುಂಬಕ್ಕೆ ಶುಕ್ರವಾರ ವಸತಿ ಇಲಾಖೆಯಿಂದ ಹಕ್ಕುಪತ್ರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

25 ಕುಟುಂಬಕ್ಕೆ ವಸತಿ ಇಲಾಖೆಯಿಂದ ಹಕ್ಕುಪತ್ರ

ಕೋಗಿಲು ಅಕ್ರಮ ನಿವಾಸಿ ಪ್ರಕರಣಗಳಿಗೆ ಸಂಬಂಧಿಸಿ 25 ಕುಟುಂಬಕ್ಕೆ ವಸತಿ ಇಲಾಖೆಯಿಂದ ಹಕ್ಕುಪತ್ರ ವಿತರಣೆಗೆ ತೀರ್ಮಾನಿಸಲಾಗಿದೆ. ಹೀಗಾಗಿ, ಶುಕ್ರವಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜಕುಮಾರ್‌ ಗಾಜಿನ ಮನೆ ಸಭಾಂಗಣದಲ್ಲಿ ಹಕ್ಕುಪತ್ರ ವಿತರಣೆಗೆ ತಯಾರಿ ಮಾಡಿಕೊಳ್ಳಲಾಗಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಕ್ಕುಪತ್ರ ವಿತರಣೆ ಸಾಧ್ಯತೆ ಇದೆ. ಸಂಜೆ 4 ಗಂಟೆಗೆ ಸಮಾರಂಭ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶುಕ್ರವಾರ ಬಳ್ಳಾರಿ ಹಾಗೂ ವಿಜಯಪುರ ಜಿಲ್ಲೆಯ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ಸಂಜೆ 5.45ರ ಸುಮಾರಿಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ. ಅವರೂ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

8 ರಿಂದ 10 ಮಂದಿ ಗಣ್ಯರ ಆಸೀನಕ್ಕೆ ವ್ಯವಸ್ಥೆ

ಕಾರ್ಯಕ್ರಮದ ವೇದಿಕೆ ಮೇಲೆ 8 ರಿಂದ 10 ಮಂದಿ ಗಣ್ಯರ ಆಸೀನಕ್ಕೆ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮುಂಭಾಗದಲ್ಲಿ ಸುಮಾರು 100 ಮಂದಿಗೆ ಕುಳಿತುಕೊಳ್ಳುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳನ್ನು ಧ್ವಂಸಗೊಳಿಸಿದ್ದ ಪಾಲಿಕೆ

- ಇದು ‘ಬುಲ್ಡೋಜರ್‌ ನ್ಯಾಯ’ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಆಕ್ರೋಶ

- ಬೆನ್ನಲ್ಲೇ, ಮನೆ ಕಳೆದುಕೊಂಡವರಿಗೆ ಸೂರು ಕಲ್ಪಿಸಲು ಸರ್ವೇ ನಡೆಸಿದ್ದ ರಾಜ್ಯ ಸರ್ಕಾರ

- ರಾಜೀವ್‌ ಗಾಂಧಿ ವಸತಿ ನಿಗಮದಿಂದ ಫ್ಲ್ಯಾಟ್‌ ನೀಡುವ ಬಗ್ಗೆ ಚರ್ಚೆ. ಭಾರಿ ವಿರೋಧ

- ಸಮೀಕ್ಷೆಯಲ್ಲಿ 167 ಕುಟುಂಬಗಳ 25 ಮಂದಿ ಮಾತ್ರ ಅರ್ಹರು ಪತ್ತೆ. ಅವರಿಗೆ ಹಕ್ಕುಪತ್ರ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ