ಕೋಲಾರ: ₹50 ಸಾವಿರ ಕೋಟಿ ಅನುದಾನ ನೀಡಲಿ

KannadaprabhaNewsNetwork |  
Published : Mar 04, 2025, 12:32 AM IST
೩ಕೆಎಲ್‌ಆರ್-೫ರಾಜ್ಯ ಬಜೆಟ್‌ನಲ್ಲಿ ಕೋಲಾರ ಜಿಲ್ಲೆಗೆ ೫೦ ಸಾವಿರ ಕೋಟಿ ಅನುಧಾನದ ಜೊತೆಗೆ ವಿದರ್ಭ ಪ್ಯಾಕೇಜ್ ಘೋಷಣೆ ಮಾಡಿ  ಕೆಸಿವ್ಯಾಲಿ ೩ನೇ ಹಂತದ ಶುದ್ಧೀಕರಣದ ಜೊತೆಗೆ ಎ.ಪಿ.ಎಂ.ಸಿ ಗೆ ೧೦೦ ಎಕರೆ ಜಮೀನು ಮಂಜೂರು ಮಾಡಬೇಕೆಂದು ರೈತಸಂಘದಿಂದ ಕೋಲಾರದ ಪಲ್ಲವಿ ವೃತ್ತದಲ್ಲಿ ಜಾನುವಾರುಗಳ ಸಮೇತ ಹೋರಾಟ ಮಾಡಿದರು. | Kannada Prabha

ಸಾರಾಂಶ

ಗಡಿಭಾಗದ ರೈತರ ನಿದ್ದೆಗೆಡಿಸುತ್ತಿರುವ ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ, ಯರಗೋಳ್ ನೀರಾವರಿ ಯೋಜನೆಯನ್ನು ತ್ವರಿತಗತಿಯಲ್ಲಿ ಕುಡಿಯಲು ಸರಬರಾಜು ಮಾಡಲು ಅನುದಾನ, ಕೃಷಿ ಆಧಾರಿತ ಕೃಗಾರಿಕೆಗಳು, ಮಾವು ಸಂಸ್ಕರಣಾ ಘಟಕಗಳಿಗೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಲಿ.

ಕನ್ನಡಪ್ರಭ ವಾರ್ತೆ ಕೋಲಾರರಾಜ್ಯ ಬಜೆಟ್‌ನಲ್ಲಿ ಕೋಲಾರ ಜಿಲ್ಲೆಗೆ ೫೦ ಸಾವಿರ ಕೋಟಿ ಅನುದಾನದ ಜೊತೆಗೆ ವಿದರ್ಭ ಪ್ಯಾಕೇಜ್ ಘೋಷಣೆ ಮಾಡಬೇಕು, ಕೆಸಿ ವ್ಯಾಲಿ ೩ನೇ ಹಂತದ ಶುದ್ಧೀಕರಣದ ಜೊತೆಗೆ ಎಪಿಎಂಸಿಗೆ ೧೦೦ ಎಕರೆ ಜಮೀನು ನೀಡುವಂತೆ ಒತ್ತಾಯಿಸಿ ರೈತಸಂಘವು ಪಲ್ಲವಿ ವೃತ್ತದಲ್ಲಿ ಜಾನುವಾರುಗಳ ಸಮೇತ ಪ್ರತಿಭಟನೆ ನಡೆಸಿ ಕಂದಾಯ ಅಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಕೋಲಾರ ಜಿಲ್ಲೆಯನ್ನು ಪ್ರತಿ ಸರ್ಕಾರ ಬಜೆಟ್ ನಲ್ಲಿ ನಿರ್ಲಕ್ಷ್ಯ ಮಾಡುವ ಜೊತೆಗೆ ಸ್ಥಳೀಯರ ನಾಡಿಮಿಡಿತ ಇರುವ ಉಸ್ತುವಾರಿ ಸಚಿವರ ನೇಮಕ ಮಾಡಿ ಜನ ವಿರೋಧಿ ನೀತಿಯನ್ನು ಸರ್ಕಾರಗಳು ಅನುಸರಿಸುವ ಜೊತೆಗೆ ಸ್ಥಳಿಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಲ್ಲಿ ಜನಪ್ರತಿನಿಧಿಗಳು ವಿಫಲವಾದ್ದಾರೆಂದು ಸಂಘ ಆರೋಪಿಸಿದೆ.

ಚುನಾವಣೆ ನಡೆಸಲು ಒತ್ತಾಯ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ವೇಮಗಲ್ ಮಹಿಳಾ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ಸ್ತ್ರೀಶಕ್ತಿ ಸಹಕಾರ ಸಂಘಗಳ ಸಾಲ ಮನ್ನಾ ಮಾಡಬೇಕು ಹಾಗೂ ಡಿಸಿಸಿ ಬ್ಯಾಂಕ್ ಮತ್ತು ಹಾಲು ಒಕ್ಕೂಟಕ್ಕೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದರು. ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ಎ. ನಳಿನಿಗೌಡ ಮಾತನಾಡಿ, ಗಡಿಭಾಗದ ರೈತರ ನಿದ್ದೆಗೆಡಿಸುತ್ತಿರುವ ಕಾಡು ಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ, ಯರಗೋಳ್ ನೀರಾವರಿ ಯೋಜನೆಯನ್ನು ತ್ವರಿತಗತಿಯಲ್ಲಿ ಕುಡಿಯಲು ಸರಬರಾಜು ಮಾಡಲು ಅನುದಾನ, ಕೃಷಿ ಆಧಾರಿತ ಕೃಗಾರಿಕೆಗಳು, ಮಾವು ಸಂಸ್ಕರಣಾ ಘಟಕಗಳಿಗೆ ಅನುದಾನ ಬಿಡುಗಡೆಗೆ ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ
ರಾಗಾ-ವೈಷ್ಣವ್‌ ಉದ್ಯೋಗ ಸೃಷ್ಟಿ ‘ಕ್ರೆಡಿಟ್‌ ವಾರ್’