ಕೊಪ್ಪ: ಪಿಎಸಿಎಸ್‌ಗೆ ನೂತನ ಅಧ್ಯಕ್ಷರಾಗಿ ಕೆ.ಲಿಂಗರಾಜು ಅವಿರೋಧ ಆಯ್ಕೆ

KannadaprabhaNewsNetwork |  
Published : May 20, 2024, 01:31 AM IST
17ಕೆಎಂಎನ್ ಡಿ15 | Kannada Prabha

ಸಾರಾಂಶ

ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಹಿಂದಿನ ಅಧ್ಯಕ್ಷ ಚಿಕ್ಕೋನಹಳ್ಳಿ ರಾಮಕೃಷ್ಣರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕೆ‌.ಲಿಂಗರಾಜು ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಆಶಾ ಘೋಷಿಸಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಕೊಪ್ಪ ಗ್ರಾಮದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಚಿವ ಎನ್. ಚಲುವರಾಯಸ್ವಾಮಿ ಬೆಂಬಲಿತ ಕೆ.ಲಿಂಗರಾಜು ಅವಿರೋಧವಾಗಿ ಆಯ್ಕೆಯಾದರು.‌

ಸಹಕಾರ ಸಂಘದ ಹಿಂದಿನ ಅಧ್ಯಕ್ಷ ಚಿಕ್ಕೋನಹಳ್ಳಿ ರಾಮಕೃಷ್ಣರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕೆ‌.ಲಿಂಗರಾಜು ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಆಶಾ ಘೋಷಿಸಿದರು.

ನೂತನ ಅಧ್ಯಕ್ಷ ಕೆ.ಲಿಂಗರಾಜು ಮಾತನಾಡಿ, ಸಂಘದ ನಿರ್ದೇಶಕರು ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರೆಲ್ಲರ ಸಹಕಾರ ಪಡೆದು ಸಹಕಾರ ಸಂಘದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ ಎಂದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ಮಾರ್ಗದರ್ಶನದಲ್ಲಿ ನಾನು ಕಾರ್ಯಪ್ರವೃತ್ತನಾಗಲಿದ್ದು, ರೈತರಿಗೆ ಸಕಾಲಕ್ಕೆ ರಸಗೊಬ್ಬರ ಪೂರೈಕೆ, ಸಾಲ ವಿತರಣೆ, ಷೇರುದಾರರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸುವ ಹಾಗೂ ಕೊಪ್ಪ ಸಹಕಾರ ಸಂಘವನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಇಂಗಿತ ಹೊಂದಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ನಿರ್ದೇಶಕರ ವಿಶ್ವಾಸ ಪಡೆದು ಕ್ರಿಯಾತ್ಮಕ ಮತ್ತು ಸಂಘಟನಾತ್ಮಕ ಕೆಲಸ ಮಾಡುವ ಮೂಲಕ ಸಹಕಾರ ಸಂಘವನ್ನು ಮಾದರಿಯನ್ನಾಗಿ ರೂಪಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

ಈ ವೇಳೆ ನೂತನ ಅಧ್ಯಕ್ಷರನ್ನು ನಿರ್ದೇಶಕರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹೂವಿನ ಹಾರಗಳನ್ನು ಹಾಕಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ. ಜೋಗಿಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ದಿವಾಕರ್, ಕೊಪ್ಪ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಉಪಾಧ್ಯಕ್ಷೆ ಲಕ್ಷ್ಮಮ್ಮ ಈರೇಗೌಡ, ಮಾಜಿ ಉಪಾಧ್ಯಕ್ಷ ಹಾಗೂ ನಿರ್ದೇಶಕ ರಮೇಶ್ ಕೊಪ್ಪ, ನಿರ್ದೇಶಕರಾದ ಎಚ್‌.ವಿ. ಶಿವಣ್ಣ, ಕೆ.ಜೆ. ಕೃಷ್ಣೇಗೌಡ, ರಾಮಕೃಷ್ಣ, ಟಿ. ಕಾಂತರಾಜು, ಕೆ.ಜಿ. ಜಯರಾಮು, ಶಿವಲಿಂಗೇಗೌಡ, ಜಿ.ಪಿ. ಮಂಜುಳ, ಚಂದ್ರಶೇಖರ್, ಟಿ. ಪುಟ್ಟಸ್ವಾಮಿ, ರವಿ, ಡಿಸಿಸಿ ಬ್ಯಾಂಕ್ ವೃತ್ತ ಮೆಲ್ವಿಚಾರಕ ರವೀಂದ್ರ ಕುಮಾರ್, ಸಿಇಓ ಎಂ. ಮಹಾದೇವ, ಸಿಬ್ಬಂದಿ ಕೆ. ಅಶೋಕ, ಜೆ. ಶೃತಿ, ಟಿಎಪಿಸಿಎಂಎಸ್ ನಿರ್ದೇಶಕ ಹರಳಕೆರೆ ಕರಿಯಪ್ಪ, ತಾ.ಪಂ ಮಾಜಿ ಉಪಾಧ್ಯಕ್ಷ ಬಿ.ಎಂ. ರಘು, ಸದಸ್ಯ ತೋಯಜಾಕ್ಷ, ಗ್ರಾಪಂ ಅಧ್ಯಕ್ಷ ರುದ್ರೇಶ್, ಸದಸ್ಯರಾದ ಕುಮಾರ್ ಕೊಪ್ಪ, ಕೆ.ಎಂ. ಪರ್ವೀಜ್ ಅಹಮದ್, ಗಿರೀಶ್, ನವೀನ, ಮುಖಂಡರಾದ ಸಿ.ಎಸ್.ರವಿ. ಕೆ.ಯೋಗನಂದ, ಬಿ.ಸಿ. ಸತೀಶ್, ಸಿ. ತಮ್ಮಯ್ಯ, ಎಂ.ಬಿ. ವೆಂಕಟೇಶ, ವಾಸು, ಕಾಂತರಾಜು ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್ ಜಿ ಪರ 15ರಿಂದ ಅಭಿಯಾನ: ವಿಜಯೇಂದ್ರ
.ರಾಜ್ಯದ ಕಾಂಗ್ರೆಸ್‌ ಗ್ಯಾರಂಟಿಗಳು ಇಡೀ ದೇಶಕ್ಕೆ ಮಾದರಿ