ಕನ್ನಡಪ್ರಭ ವಾರ್ತೆ ಕೊಪ್ಪಳ
ಗೃಹ ಸಚಿವರು ದೇಶದ ಜನರ ಕ್ಷಮೆಯಾಚಿಸಬೇಕು ಮತ್ತು ಕೇಂದ್ರ ಸರ್ಕಾರ ಅವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ಕೇಂದ್ರದ ಎಲ್ಲ ಸಂಘಟನೆಗಳಿಗೂ ಸಹ ಬಂದ್ಗೆ ಬೆಂಬಲಿಸುವಂತೆ ಕೋರಲಾಗಿದೆ. ಬಂಡಿ ಹಮಾಲರ ಸಂಘ, ಆಟೋ ಚಾಲಕರ ಸಂಘ, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳ ಸಂಘ ಸೇರಿದಂತೆ ಎಲ್ಲ ರೀತಿಯ ಸಂಘಟನೆಗಳನ್ನು ಸಹ ಬಂದ್ ಗೆ ಬೆಂಬಲ ನೀಡುವಂತೆ ಕೋರಲಾಗಿದೆ.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 7 ಗಂಟೆಗೆ ಪ್ರತಿಭಟನಾಕಾರರು ಜಮಾಯಿಸಲಿದ್ದಾರೆ. ಸುಮಾರು 10 ಸಾವಿರಕ್ಕೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಪೊಲೀಸ್ ಇಲಾಖೆಯ ಮಾಹಿತಿಯ ಪ್ರಕಾರ ಈ ಸಂಖ್ಯೆ ಇನ್ನು ಹೆಚ್ಚಳವಾಗುವ ಸಾಧ್ಯತೆ ಇದೆ.ತಾಲೂಕು ಕ್ರೀಡಾಂಗಣದಲ್ಲಿ ಜಮಾಯಿಸಿ, ಅಲ್ಲಿಂದ ನಗರದ ವಿವಿಧೆಡೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬಳಿಕ ಮನವಿ ಸಲ್ಲಿಸಲಾಗುವುದು.ಜಿಲ್ಲೆಯ ತಾಲೂಕು ಕೇಂದ್ರಗಳಿಂದ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ಜನರನ್ನು ಕರೆತರುವುದಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಬಂದಿರುವವರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ.ಶಾಲಾ-ಕಾಲೇಜಿಗೂ ರಜೆಗೆ ಮನವಿ
ಕೊಪ್ಪಳ ನಗರದಲ್ಲಿ ಜ. 6ರಂದು ಇಡೀ ದಿನ ಮುಷ್ಕರಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡ ಹನುಮೇಶ್ ಕಡೆಮನಿ ಹೇಳಿದರು.
ಮಾದಿಗ, ಚಲವಾದಿ, ಮುಸ್ಲಿಮ್, ಕ್ರಿಶ್ಚಿಯನ್, ಮ್ಯಾದರ್, ಲಂಬಾಣಿ ಸಮಾಜ, ಲಿಂಗಾಯತ, ಹಾಲುಮತ, ವಾಲ್ಮೀಕಿ, ಭೋವಿ, ಭಜಂತ್ರಿ, ಮಡಿವಾಳ, ಮೋಚಿ, ಹಡಪದ, ಪಂಚಮಸಾಲಿ, ಸುಡುಗಾಡು ಸಿದ್ದರ, ಚನ್ನದಾಸರ, ಶಿಳ್ಳೆಕ್ಯಾತರ, ಸವಿತಾ ಸೇರಿದಂತೆ ಅನೇಕ ಸಮಾಜದ ಸಂಘಟನೆಗಳು ಹಾಗೂ ಯುವಕರ ಸಂಘ, ದಲಿತ ಸಂಘಟನೆಗಳು, ಅಲ್ಪಸಂಖ್ಯಾತರ ಹಿಂದುಳಿದ ವರ್ಗದವರ ಸಂಘಟನೆಗಳು, ರೈತ ಸಂಘಟನೆಗಳು, ಮಹಿಳಾ ಸಂಘಟನೆ, ಮಾನವ ಹಕ್ಕುಗಳ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ವಕೀಲರ ಸಂಘ, ಕಾರ್ಮಿಕರ ಸಂಘ, ನೌಕರರ ಸಂಘ, ಮುಸ್ಲಿಮ್ ಪಂಚ್ ಕಮಿಟಿಗಳು, ಪಾಸ್ಟರ್ಸ್ ಅಸೋಸಿಯೇಷನ್, ಕಾರ್ ಟ್ಯಾಕ್ಸಿಗಳ, ಆಟೋ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳ ಸಂಘ, ನೌಕರರ ಸಂಘ, ಮಾಲೀಕರ ಸಂಘ, ವರ್ತಕರ ಸಂಘ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ಸಂಪೂರ್ಣ ಬೆಂಬಲಿಸಿದ್ದು, ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಬಂದು ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.