ಕೋಟ ಮೂರ್ತೆದಾರರ ಸಹಕಾರಿ ಸಂಘ ೨೦೨೪-೨೫ನೇ ಸಾಲಿನಲ್ಲಿ ೩೯೭ ಕೋಟಿ ರು. ವ್ಯವಹಾರ ನಡೆಸಿ ೧.೦೯ ಕೋಟಿ ರು. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ. ೧೨ ರಷ್ಟು ಲಾಭಾಂಶವನ್ನು ನೀಡಲು ನಿರ್ಧರಿಸಿದೆ.
ಕನ್ನಡಪ್ರಭ ವಾರ್ತೆ ಕೋಟ
ಕೋಟ ಮೂರ್ತೆದಾರರ ಸಹಕಾರಿ ಸಂಘದ ೩೪ನೇ ಮಹಾಸಭೆ ಇತ್ತೀಚಿಗೆ ಸಂಘದ ಪ್ರಧಾನ ಕಚೇರಿಯ ಎಸ್. ಬಂಗಾರಪ್ಪ ಸಭಾಂಗಣದಲ್ಲಿ ಜರಗಿತು. ಸಂಘದ ಅಧ್ಯಕ್ಷ ಕೆ. ಕೊರಗ ಪೂಜಾರಿ ಅವರು, ಸಂಘ ೨೦೨೪-೨೫ನೇ ಸಾಲಿನಲ್ಲಿ ೩೯೭ ಕೋಟಿ ರು. ವ್ಯವಹಾರ ನಡೆಸಿ ೧.೦೯ ಕೋಟಿ ರು. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ. ೧೨ ರಷ್ಟು ಲಾಭಾಂಶವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಘೋಷಿಸಿದರು.ಅಲ್ಲದೆ ಸಂಘ ಪ್ರಸ್ತುತ ೧೩೦೫೨ ಸದಸ್ಯರ ಬಲ ಹೊಂದಿದ್ದು, ೧.೪೫ ಕೋಟಿ ರು. ಪಾಲು ಬಂಡವಾಳ, ೮೩.೮೬ ಕೋಟಿ ರು. ಠೇವಣಿ, ೬೯.೦೭ ಕೋಟಿ ರು. ಸಾಲ ನೀಡಿದೆ. ಸಂಘ ಸತತ ೨೯ ವರ್ಷಗಳಿಂದ ‘ಎ’ ತರಗತಿ ಆಡಿಟ್ ವರ್ಗೀಕರಣ ಪಡೆದಿದೆ, ಕೋಟ, ಬಾರ್ಕೂರು, ಸಾಸ್ತಾನ, ಕೊಕ್ಕರ್ಣೆ, ಉಡುಪಿ-ಪುತ್ತೂರು, ಹೂಡೆಗಳಲ್ಲಿ ಬ್ಯಾಕಿಂಗ್ ಶಾಖೆಗಳನ್ನು ಹೊಂದಿದೆ ಎಂದರು.
ಸಂಘವು ಮಹಿಳಾ ಸಶಕ್ತೀಕರಣಕ್ಕಾಗಿ ೨೭೮ ಕಲ್ಪತರು ಮಹಿಳಾ ಸ್ವಸಹಾಯ ಗುಂಪುಗಳನ್ನು ಪ್ರಾಯೋಜಿಸಿದ್ದು ೫.೯೯ ಕೋಟಿ ರು. ಸಾಲ ನೀಡಿದೆ ಎಂದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕೆಮ್ಮಣ್ಣು ವರದಿ ಮಂಡಿಸಿದರು. ಉಪಾಧ್ಯಕ್ಷ ಜಯರಾಮ ಪೂಜಾರಿ ಬಾರ್ಕೂರು, ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ ಮತ್ತು ಪಿ. ಕೃಷ್ಣ ಪೂಜಾರಿ ಪಾರಂಪಳ್ಳಿ, ನಿರ್ದೇಶಕರಾದ ಜಿ. ಸಂಜೀವ ಪೂಜಾರಿ ಕೋಡಿ, ರಾಮ ಪೂಜಾರಿ, ಮಂಜುನಾಥ ಪೂಜಾರಿ ಬಾರ್ಕೂರು, ಕೃಷ್ಣ ಪೂಜಾರಿ ಪಿ. ಕೋಡಿ ಕನ್ಯಾಣ, ಪ್ರಭಾವತಿ ಡಿ. ಬಿಲ್ಲವ ಕೋಟ, ಭಾರತಿ ಎಸ್. ಪೂಜಾರಿ ಕರಿಕಲ್ ಕಟ್ಟೆ, ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಜಿ. ಕೃಷ್ಣ ಹಾಗೂ ಶ್ರೀದೇವಿ ಕಲ್ಕೂರ ಇದ್ದರು. ಕೋಟ ಶಾಖೆಯ ಹಿರಿಯ ವ್ಯವಸ್ಥಾಪಕ ದಿನೇಶ್ ಪೂಜಾರಿ ಬಾರ್ಕೂರು ಸ್ವಾಗತಿಸಿದರು. ನಿತೇಶ್ ಹಂದಟ್ಟು ವಂದಿಸಿದರು. ಹಿರಿಯ ವ್ಯವಸ್ಥಾಪಕ ರಮೇಶ್ ಪೂಜಾರಿ ಬಾರ್ಕೂರು ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.