ಕನ್ನಡಪ್ರಭ ವಾರ್ತೆ ಕೋಟ
ಅವರು ಇಲ್ಲಿನ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ ಕೋಟತಟ್ಟು ಗ್ರಾ.ಪಂ., ಟೀಮ್ ಭವಾಬ್ಧಿ ಪಡುಕರೆ ಸಂಯೋಜನೆಯೊಂದಿಗೆ ೨೦೭ನೇ ಭಾನುವಾರ ಪರಿಸರಸ್ನೇಹಿ ಕಾರ್ಯಕ್ರಮದಲ್ಲಿ ಪಡುಕರೆ ಬೀಚ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಪರಿಸರದ ಬಗ್ಗೆ ಇತ್ತೀಚಿಗಿನ ದಿನಗಳಲ್ಲಿ ನಿರ್ಲಕ್ಷ್ಯ ಹೆಚ್ಚಾಗುತ್ತಿದೆ. ಕಡಲಕಿನಾರೆಯಲ್ಲಿ ತ್ಯಾಜ್ಯ ವಿಪರೀತವಾಗಿ ಎಸೆಯಲಾಗುತ್ತಿದೆ, ಈ ರೀತಿಯ ಅವ್ಯವಸ್ಥೆ ಮುಂದಾಗದಂತೆ ಎಚ್ಚರ ವಹಿಸುವುದು ಅತ್ಯಗತ್ಯವಾಗಿದೆ ಎಂದು ಎಚ್ಚರಿಸಿದರು.ಈ ವೇಳೆ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್, ಟೀಮ್ ಭವಾಬ್ಧಿ ಪ್ರಮುಖರಾದ ದೇವೇಂದ್ರ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು. ಕೋಟತಟ್ಟು ಗ್ರಾ.ಪಂ. ಸಹಕಾರ ನೀಡಿತು. ಉಪಹಾರದ ವ್ಯವಸ್ಥೆಯನ್ನು ಶ್ರೀ ಚಿತ್ತಾರಿ ಟ್ರಸ್ಟ್ ನೀಡಿತು.