ಕನ್ನಡಪ್ರಭ ವಾರ್ತೆ ಬಾಗಲಕೋಟೆಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ ಈ ಆಂಬ್ಯುಲೆನ್ಸ್ನ್ನು ಕುಮಾರೇಶ್ವರ ಆಸ್ಪತ್ರೆಗೆ ನೀಡುವುದರ ಮೂಲಕ ಕೋಟಕ್ ಬ್ಯಾಂಕ್ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಅತ್ಯಂತ ಅರ್ಥಪೂರ್ಣವಾಗಿ ನಿರ್ವಹಿಸಿದೆ. ಸಾರ್ವಜನಿಕರ ಆರೋಗ್ಯ ಕುರಿತಾದ ಅವರ ಪ್ರಾಮಾಣಿಕ ಕಾಳಜಿ ಶ್ಲಾಘನೀಯ ಎಂದು ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಬಣ್ಣಿಸಿದರು.ನಗರದ ಬಿ.ವಿ.ವಿ ಸಂಘದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಕೋಟಕ್ ಮಹೀಂದ್ರಾ ಬ್ಯಾಂಕ್ ವತಿಯಿಂದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ (ಸಿ.ಎಸ್.ಆರ್) ₹45 ಲಕ್ಷ ಮೌಲ್ಯದ ಅತ್ಯಾಧುನಿಕ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ಕೀ ಸ್ವೀಕರಿಸಿ ಸಾರ್ವಜನಿಕರ ಸೇವೆಗಾಗಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕುಮಾರೇಶ್ವರ ಆಸ್ಪತ್ರೆಯು ಈ ಉನ್ನತ ಕೊಡುಗೆಯನ್ನು ಸಾರ್ವಜನಿಕರ ಆರೋಗ್ಯ ಸುಧಾರಣೆಗಾಗಿ ಸದ್ಬಳಕೆ ಮಾಡಿಕೊಳ್ಳುತ್ತದೆ. ಕೊಟಕ್ ಬ್ಯಾಂಕ್ ವ್ಯವಸ್ಥಾಪಕರ ಈ ಅಭಿಮಾನದ ನೆರವಿಗೆ ಕೃತಜ್ಞತೆಗಳು ಎಂದು ತಿಳಿಸಿದರು.ಬಿ.ವಿ.ವಿ.ಸಂಘದ ಆಯುವೇದ ಕಾಲೇಜಿನ ನೂತನ ಆವರಣದಲ್ಲಿ ಕೊಟಕ್ ಮಹೀಂದ್ರಾ ಬ್ಯಾಂಕಿನ ರಿಜಿನಲ್ ಹೆಡ್ ಕಾರ್ತಿಕ್.ಸಿ, ಏರಿಯಾ ಮ್ಯಾನೇಜರ್ ಲಕ್ಷ್ಮಿಕಾಂತ ಖೋಡೆ, ವಿಭಾಗೀಯ ಮ್ಯಾನೇಜರ್ ರವೀಂದ್ರ ಪಂಡಿತ, ರಿಜಿನಲ್ ಮಾರ್ಕೇಟಿಂಗ್ ಮ್ಯಾನೇಜರ್ ರಂಗನಾಥ ರಾಂಪೂರೆ ಮತ್ತು ಬಾಗಲಕೋಟೆ ಶಾಖಾ ಮ್ಯಾನೇಜರ್ ಪ್ರದೀಪ ಖಟಾವಕರ್ ಅವರು ಅಂಬ್ಯುಲೆನ್ಸ್ ಕೀ ಯನ್ನು ಹಸ್ತಾಂತರಿಸಿದರು.ಈ ಸಂದರ್ಭ ಬಿ.ವಿ.ವಿ.ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ವೆಹಿಕಲ್ ಕಮಿಟಿ ಕಾರ್ಯಾಧ್ಯಕ್ಷ ಅಶೋಕ ಕರಡಿ (ರೇಣುಕೊಪ್ಪ), ಬಿ.ವಿ.ವಿ ಸಂಘದ ವಿವಿಧ ಸಮಿತಿಗಳ ಕಾರ್ಯಾಧ್ಯಕ್ಷರು ಮತ್ತು ಗೌರವಾನ್ವಿತ ಸದಸ್ಯರು, ಪ್ರೊಫೆಸರ್ ಎನ್.ಜಿ.ಕರೂರ, ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಮತ್ತು ವಿವಿಧ ಸಂಸ್ಥೆಗಳ ಪ್ರಾಚಾರ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಅತ್ಯಾಧುನಿಕ ಆಂಬ್ಯುಲೆನ್ಸ್ ಫೋರ್ಸ್ ಡಬ್ಲ್ಯು 3350 ಮಾದರಿ