ಆರೋಗ್ಯ ಕುರಿತಾದ ಕೋಟಕ್‌ ಕಾಳಜಿ ಶ್ಲಾಘನೀಯ

KannadaprabhaNewsNetwork |  
Published : Dec 30, 2024, 01:02 AM IST
ಕುಮಾರೇಶ್ವರ ಆಸ್ಪತ್ರೆಗೆ ಅತ್ಯಾಧುನಿಕ ಅಂಬ್ಯುಲೆನ್ಸ್ ಹಸ್ತಾಂತರಕೊಟಕ್ ಮಹೀಂದ್ರಾ ಬ್ಯಾಂಕ್ನ ಕೊಡುಗೆ | Kannada Prabha

ಸಾರಾಂಶ

ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ ಈ ಆಂಬ್ಯುಲೆನ್ಸ್‌ನ್ನು ಕುಮಾರೇಶ್ವರ ಆಸ್ಪತ್ರೆಗೆ ನೀಡುವುದರ ಮೂಲಕ ಕೋಟಕ್ ಬ್ಯಾಂಕ್ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಅತ್ಯಂತ ಅರ್ಥಪೂರ್ಣವಾಗಿ ನಿರ್ವಹಿಸಿದೆ. ಸಾರ್ವಜನಿಕರ ಆರೋಗ್ಯ ಕುರಿತಾದ ಅವರ ಪ್ರಾಮಾಣಿಕ ಕಾಳಜಿ ಶ್ಲಾಘನೀಯ ಎಂದು ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಬಣ್ಣಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ ಈ ಆಂಬ್ಯುಲೆನ್ಸ್‌ನ್ನು ಕುಮಾರೇಶ್ವರ ಆಸ್ಪತ್ರೆಗೆ ನೀಡುವುದರ ಮೂಲಕ ಕೋಟಕ್ ಬ್ಯಾಂಕ್ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಅತ್ಯಂತ ಅರ್ಥಪೂರ್ಣವಾಗಿ ನಿರ್ವಹಿಸಿದೆ. ಸಾರ್ವಜನಿಕರ ಆರೋಗ್ಯ ಕುರಿತಾದ ಅವರ ಪ್ರಾಮಾಣಿಕ ಕಾಳಜಿ ಶ್ಲಾಘನೀಯ ಎಂದು ಬಿ.ವಿ.ವಿ.ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಬಣ್ಣಿಸಿದರು.ನಗರದ ಬಿ.ವಿ.ವಿ ಸಂಘದ ಹಾನಗಲ್ಲ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಕೋಟಕ್ ಮಹೀಂದ್ರಾ ಬ್ಯಾಂಕ್ ವತಿಯಿಂದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿ (ಸಿ.ಎಸ್.ಆರ್) ₹45 ಲಕ್ಷ ಮೌಲ್ಯದ ಅತ್ಯಾಧುನಿಕ ಆಂಬ್ಯುಲೆನ್ಸ್‌ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ಕೀ ಸ್ವೀಕರಿಸಿ ಸಾರ್ವಜನಿಕರ ಸೇವೆಗಾಗಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕುಮಾರೇಶ್ವರ ಆಸ್ಪತ್ರೆಯು ಈ ಉನ್ನತ ಕೊಡುಗೆಯನ್ನು ಸಾರ್ವಜನಿಕರ ಆರೋಗ್ಯ ಸುಧಾರಣೆಗಾಗಿ ಸದ್ಬಳಕೆ ಮಾಡಿಕೊಳ್ಳುತ್ತದೆ. ಕೊಟಕ್ ಬ್ಯಾಂಕ್‌ ವ್ಯವಸ್ಥಾಪಕರ ಈ ಅಭಿಮಾನದ ನೆರವಿಗೆ ಕೃತಜ್ಞತೆಗಳು ಎಂದು ತಿಳಿಸಿದರು.ಬಿ.ವಿ.ವಿ.ಸಂಘದ ಆಯುವೇದ ಕಾಲೇಜಿನ ನೂತನ ಆವರಣದಲ್ಲಿ ಕೊಟಕ್ ಮಹೀಂದ್ರಾ ಬ್ಯಾಂಕಿನ ರಿಜಿನಲ್ ಹೆಡ್ ಕಾರ್ತಿಕ್.ಸಿ, ಏರಿಯಾ ಮ್ಯಾನೇಜರ್ ಲಕ್ಷ್ಮಿಕಾಂತ ಖೋಡೆ, ವಿಭಾಗೀಯ ಮ್ಯಾನೇಜರ್ ರವೀಂದ್ರ ಪಂಡಿತ, ರಿಜಿನಲ್ ಮಾರ್ಕೇಟಿಂಗ್ ಮ್ಯಾನೇಜರ್ ರಂಗನಾಥ ರಾಂಪೂರೆ ಮತ್ತು ಬಾಗಲಕೋಟೆ ಶಾಖಾ ಮ್ಯಾನೇಜರ್ ಪ್ರದೀಪ ಖಟಾವಕರ್ ಅವರು ಅಂಬ್ಯುಲೆನ್ಸ್ ಕೀ ಯನ್ನು ಹಸ್ತಾಂತರಿಸಿದರು.ಈ ಸಂದರ್ಭ ಬಿ.ವಿ.ವಿ.ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ.ಸಜ್ಜನ (ಬೇವೂರ), ವೆಹಿಕಲ್ ಕಮಿಟಿ ಕಾರ್ಯಾಧ್ಯಕ್ಷ ಅಶೋಕ ಕರಡಿ (ರೇಣುಕೊಪ್ಪ), ಬಿ.ವಿ.ವಿ ಸಂಘದ ವಿವಿಧ ಸಮಿತಿಗಳ ಕಾರ್ಯಾಧ್ಯಕ್ಷರು ಮತ್ತು ಗೌರವಾನ್ವಿತ ಸದಸ್ಯರು, ಪ್ರೊಫೆಸರ್ ಎನ್.ಜಿ.ಕರೂರ, ಮೆಡಿಕಲ್ ಕಾಲೇಜ್ ಪ್ರಾಚಾರ್ಯ ಡಾ.ಭುವನೇಶ್ವರಿ ಯಳಮಲಿ ಮತ್ತು ವಿವಿಧ ಸಂಸ್ಥೆಗಳ ಪ್ರಾಚಾರ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಅತ್ಯಾಧುನಿಕ ಆಂಬ್ಯುಲೆನ್ಸ್ ಫೋರ್ಸ್‌ ಡಬ್ಲ್ಯು 3350 ಮಾದರಿ

ಫೊರ್ಸ್‌ ಟ್ರಾವೆಲ್ಲರ್ ಆಂಬ್ಯುಲೆನ್ಸ್‌ ಎಂದು ಕರೆಯಲಾಗುವ ಈ ಅತ್ಯಾಧುನಿಕ ಆಂಬ್ಯುಲೆನ್ಸ್ ''''''''ಫೋಸರ್್ ಡಬ್ಲ್ಯು.3350'''''''' ಮಾದರಿಯದ್ದಾಗಿದ್ದು ರೋಗಿಯ ಚಿಕಿತ್ಸೆಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನು ಒಳಗೊಂಡಿದೆ.ಪ್ರಸ್ತುತ ಭಾರತದಲ್ಲಿ ಉಪಯೋಗಿಸಲ್ಪಡುತ್ತಿರುವ ಆಂಬ್ಯುಲೆನ್ಸ್‌ ವಾಹನಗಳಲ್ಲೇ ಈ ಆಂಬ್ಯುಲೆನ್ಸ್‌ ದೊಡ್ಡ ಗಾತ್ರದ ಮತ್ತು ಅತ್ಯಾಧುನಿಕವಾದ ಆಂಬ್ಯುಲೆನ್ಸ್ ಎಂದು ಪರಿಗಣಿಸಲ್ಪಟ್ಟಿದೆ. ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಿರುವ ಈ ಆಂಬ್ಯುಲೆನ್ಸ್ ವಾಹನದಲ್ಲಿ ಅಮೆರಿಕಾ ದೇಶದಲ್ಲಿ ತಯಾರಿಸಲ್ಪಟ್ಟ ವೆಂಟಿಲೇಟರ್ ಅಳವಡಿಸಲಾಗಿದೆ. ಸೆಂಟ್ರಲ್ ಆಕ್ಸಿಜನ್ ವ್ಯವಸ್ಥೆ ಇದ್ದು, ಇದರಲ್ಲಿ ಸಿಲಿಂಡರ್‌ಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಚಿಕಿತ್ಸೆಗೆ ಅಗತ್ಯವಾದ ಹೃದಯಕ್ಕೆ ಶಾಖ ಕೊಡುವ ಯಂತ್ರ, ಕೃತಕ ಉಸಿರಾಟ ಯಂತ್ರ, ಇನ್ಫ್ಯೂಜನ್ ಪಂಪ್, ಕಾರ್ವಿಯಾಕ್ ಮಾನಿಟರ್, ಸಿ.ಪಿ.ಆರ್ ಕಿಟ್, ಇ.ಸಿ.ಜಿ ಯಂತ್ರ, ಸ್ಪ್ಲಿಂಟ್ ಕಿಟ್ ಸ್ಪೈನ್ ಬೋರ್ಡ ಇತ್ಯಾದಿ ಉಪಕರಣಗಳನ್ನು ಒಳಗೊಂಡಿದೆ. ಸ್ವಯಂ ಚಾಲಿತ ಸ್ಟ್ರೆಚರ್, ಔಷಧ ಸಂಗ್ರಹಣೆಗಾಗಿ ರೆಫ್ರಿಜಿರೇಟರ್ ಮತ್ತು ಸ್ಪಾಟ್ಲೈಟ್ ವ್ಯವಸ್ಥೆ ಈ ಅಂಬ್ಯುಲೆನ್ಸ್ನ ವಿಶೇಷತೆಗಳಾಗಿವೆ. ನಿರಂತರ ವಿದ್ಯುತ್ ಪೂರೈಕೆಗಾಗಿ ಯು.ಪಿ.ಎಸ್ ಅಳವಡಿಸಲಾಗಿದೆ ಮತ್ತು ವೈದ್ಯರಿಗೆ ಪ್ರತ್ಯೇಕ ಕ್ಯಾಬಿನ್ ರಚಿಸಲಾಗಿದೆ. ಈ ಅಂಬ್ಯುಲೆನ್ಸ್ ವಾಹನದಲ್ಲಿ ತೀವ್ರನಿಗಾ ಘಟಕ (ಅಗ) ಮತ್ತು ಸಣ್ಣ ಆಪರೇಷನ್ ಥೇಟರ್ ವ್ಯವಸ್ಥೆಗೊಳಿಸಲಾಗಿದ್ದು ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗಳಿಗೆ ಅನುಕೂಲವಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ