ಹರಪನಹಳ್ಳಿ: ನಗರದ ಐತಿಹಾಸಿಕ ಪರಂಪರೆವುಳ್ಳ ಕೋಟೆ ಆಂಜನೇಯ ದೇವಸ್ಥಾನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಲು ಮುಂದಾಗಿರುವ ತಾಲೂಕು ಆಡಳಿತದ ಕ್ರಮ ಸರಿಯಲ್ಲ. ತಕ್ಷಣ ಅದನ್ನು ತಡೆ ಹಿಡಿಯಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ವಾಲ್ಮೀಕಿ ಸಮಾಜದ ಮುಖಂಡ ಎಚ್.ಕೆ. ಹಾಲೇಶ ಹೇಳಿದರು.
ಆದರೆ ಕೆಲವರು ಕೋಟೆ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸಿ ಅಭಿವೃದ್ಧಿಪಡಿಸಬೇಕು ಎಂದು ಹೇಳಿಕೆ ನೀಡಿದ್ದಾರೆ. ಇದು ಖಂಡನೀಯ. ದೇವಸ್ಥಾನಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಆದಾಯ ಇಲ್ಲ. ಕೋಟ್ಯಂತರ ಬೆಲೆ ಬಾಳುವ ಆಸ್ತಿಯೂ ಇಲ್ಲ. ಭಕ್ತರಿಂದ ಬಂದಂತಹ ದೇಣಿಗೆ ಅವರ ಸಹಕಾರದಿಂದ ಸಮಿತಿಯವರು ಅಭಿವೃದ್ಧಿ ಮಾಡಿದ್ದಾರೆ ಎಂದರು.
ಈ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ತಹಶೀಲ್ದಾರ್ ನೇತೃತ್ವದಲ್ಲಿ ಈಗಲೂ ಅಡಾಕ್ ಸಮಿತಿಯೊಂದು ಜಾರಿಯಲ್ಲಿದೆ. ಆದರೆ ಏಕೆ ಅಭಿವೃದ್ಧಿ ಕಾಮಗಾರಿ ಕೈಗೊಂಡಿಲ್ಲ? ಈ ಸಂಬಂಧ ಅನೇಕ ಬಾರಿ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಿತಿಯಿಂದ ಅರ್ಜಿ ಸಲ್ಲಿಸಿದ್ದೇವೆ. ಆದರೂ ಯಾರು ಇತ್ತ ಗಮನ ಹರಿಸಿಲ್ಲ ಎಂದರು.ದೇವಸ್ಥಾನದಲ್ಲಿ ಭ್ರಷ್ಟಾಚಾರ, ಹಣ ದುರುಯೋಗ ನಡೆದಿಲ್ಲ. ಸುಳ್ಳು ಆರೋಪವನ್ನು ಸಂಪೂರ್ಣವಾಗಿ ತಳ್ಳಿ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು.
ವಿಎಚ್ಪಿ ಮುಖಂಡ ಎಚ್.ಎಂ.ಜಗದೀಶ, ಎಚ್.ವೆಂಕಟೇಶ ಮಾತನಾಡಿದರು.
ಹರಪನಹಳ್ಳಿ ತಾಲೂಕಿನಲ್ಲಿ ಅನೇಕ ಕಡೆ ಸುಮಾರು 381 ಎಕರೆ ವಕ್ಫ್ ಬೋರ್ಡ್ ಹೆಸರಿನಲ್ಲಿ ಆಸ್ತಿ ಇದೆ. ಇದನ್ನು ಶಾಸಕರು ಆಡಳಿತಾಧಿಕಾರಿಗಳು ಗಮನಿಸಬೇಕು. ಅದನ್ನು ಬಿಟ್ಟು ಕೋಟೆ, ಪರಂಪರೆ ಇತಿಹಾಸ ಇರುವ ಜಾಗವನ್ನು ಸರ್ಕಾರಕ್ಕೆ ಸೇರಿಸುವುದು ಸಮಂಜಸವಲ್ಲ ಎನ್ನುತ್ತಾರೆ ಹರಪನಹಳ್ಳಿ ಪುರಸಭೆ ಮಾಜಿ ಅಧ್ಯಕ್ಷ ಎಚ್.ಕೆ. ಹಾಲೇಶ್.