ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ಅಮೆರಿಕಾ ಇರಾನ್ ದೇಶದ ಯುದ್ಧದಿಂದ ಭಾರತ ದೇಶದಲ್ಲಿ ಅಡುಗೆ ಅನಿಲ ಮತ್ತು ಪೆಟ್ರೋಲ್, ಡಿಸೇಲ್ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅಡುಗೆ ಅನಿಲ ಬುಕ್ಕಿಂಗ್ ತಗೆದುಕೊಳ್ಳುತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಹಾಸ್ಟೇಲ್, ಶಾಲಾ ಕಾಲೇಜುಗಳನ್ನು ಮುಚ್ಚಿದ್ದಾರೆ. ರಾಜ್ಯದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪಿಜಿಗಳಲ್ಲಿ ವಾಸ ಮಾಡುತ್ತಿದ್ದು, ಊಟವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಸಣ್ಣಪುಟ್ಟ ಕೆಲಸ ಮಾಡುವ ಕೂಲಿ ಕಾರ್ಮಿಕರು, ವ್ಯಾಪರಸ್ಥರು ಎಲ್ಲರಿಗೂ ಏನು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಪ್ರಧಾನ ಕಾರ್ಯದರ್ಶಿ ಚನ್ನರಾಯಪ್ಪ ಮಾತನಾಡಿ, ಇರಾಕ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಕೂಡಲೇ ನಿಲ್ಲಿಸಬೇಕು. ಪ್ರಸ್ತುತ ಜಗತ್ತಿಗೆ ಬೇಕಾಗಿರುವುದು ಶಾಂತಿಯೇ ಹೊರತು ಯುದ್ಧವಲ್ಲ. ಅಮೆರಿಕ ಅಧ್ಯಕ್ಷ ಟ್ರಂಪ್ ತಮ್ಮ ಸರ್ವಾಧಿಕಾರಿ ಧೋರಣೆ ನಿಲ್ಲಿಸಬೇಕು. ಯುದ್ಧದಿಂದ ಹಲವಾರು ಜನರು ನಲುಗಿ ಹೋಗಿದ್ದು, ಹಲವಾರು ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಯುದ್ಧವನ್ನು ನಿಲ್ಲಿಸಬೇಕು . ದೇಶದಲ್ಲಿ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಸರಬರಾಜಿನಲ್ಲಿ ಬಾರಿ ಪರಿಣಾಮ ಬೀರಿದೆ. ಇದರಿಂದ ಜನಸಾಮಾನ್ಯರಿಗೆ ಹೊರೆಯಾಗಿದೆ. ಕೋಮುದ್ವೇಷ ಬಿತ್ತುವ ಬಿಜೆಪಿ ಯವರು ಈ ಬಗ್ಗೆ ಯಾಕೆ ಬಾಯಿ ಬಿಡುತ್ತಿಲ್ಲ. ಯುದ್ಧ ನಿಲ್ಲಿಸುವಂತೆ ಮೋದಿಯವರಿಗೆ ಏಕೆ ಹೇಳುತ್ತಿಲ್ಲ ಎಂದು ಪ್ರಶ್ನಿಸಿದರು.ಅಧ್ಯಕ್ಷ ಬಿ.ಜಯರಾಮರೆಡ್ಡಿ ಮಾತನಾಡಿ,ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಫಲ್ಯದಿಂದ ಸಾರ್ವಜನಿಕರು ಸಮಸ್ಯೆ ಎದುರಿಸಬೇಕಾಗಿದೆ. ಆಡಳಿತ ನಡೆಸಲು ವಿಫಲರಾಗಿರುವ ಮೋದಿ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸಿಕೆಬಿ-3 ಯುದ್ಧ ನಿಲ್ಲಿಸಲು ಆಗ್ರಹಿಸಿ ಕೆಪಿಆರ್ ಎಸ್ ನಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು