ಕೆಪಿಎಸ್ ಶಾಲೆ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ, ನಿರ್ವಹಣೆ ಕಲಿಸುತ್ತದೆ: ಬಿಇಒ ಉಮಾ

KannadaprabhaNewsNetwork |  
Published : Feb 01, 2026, 02:00 AM IST
31ಕೆಎಂಎನ್ ಡಿ13 | Kannada Prabha

ಸಾರಾಂಶ

ಸಾಧಕರೆಲ್ಲರೂ ಸರ್ಕಾರಿ ಶಾಲೆಯಲ್ಲಿ ಓದಿದವರೇ ಹೆಚ್ಚು. ಈಗ ಉನ್ನತ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಮಗೆ ಈಗ ಸರ್ಕಾರಿ ಉದ್ಯೋಗ ಬೇಕು ಎನ್ನುತ್ತೇವೆ. ಆದರೆ, ಸರ್ಕಾರಿ ಶಾಲೆ ಬೇಡ ಎಂಬ ಮನಸ್ಥಿತಿಯಲ್ಲಿದ್ದೇವೆ. ಇದರಿಂದ ಹೊರಬರಬೇಕು.

ಕನ್ನಡಪ್ರಭ ವಾರ್ತೆ ಹಲಗೂರು

ವಿದ್ಯಾರ್ಥಿಗಳು ವ್ಯಾಸಂಗದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸುವುದು, ಜೀವನ ಕೌಶಲ್ಯ ಮತ್ತು ನಿರ್ವಹಣೆ ಹೇಗೆ ಮಾಡಬೇಕು ಎಂಬುದನ್ನು ಕಲಿಸಿಕೊಡುವುದೇ ಕೆಪಿಎಸ್ ಶಾಲೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ ತಿಳಿಸಿದರು .

ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಕೆಪಿಎಸ್ ಶಾಲಾ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲರಿಗೂ ಆಂಗ್ಲ ಮಾಧ್ಯಮದ ಅವಶ್ಯಕತೆ ಇದ್ದು, ಈ ಶಾಲೆಯಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಸಂಪೂರ್ಣ ಉಚಿತ ಶಿಕ್ಷಣದ ಜೊತೆಗೆ ಕನ್ನಡ ಮಾಧ್ಯಮದಲ್ಲೂ ಕೂಡ ಶಿಕ್ಷಣ ನೀಡಲಾಗುತ್ತಿದೆ ಎಂದರು.

2018ರಲ್ಲಿ ಶಾಲೆ ಪ್ರಾರಂಭವಾಯಿತು. ಈ ವರ್ಷದಿಂದ ಮಳವಳ್ಳಿ ತಾಲೂಕಿನಲ್ಲಿ ಇನ್ನೂ ಮೂರು ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲಾಗುತ್ತಿದೆ. ಎಲ್ಲಾ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಉಚಿತವಾಗಿ ನೀಡಬೇಕೆಂಬುದೇ ಸರ್ಕಾರದ ಮುಖ್ಯ ಉದ್ದೇಶ ಎಂದರು.

ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್ ಮಾತನಾಡಿ, ಸಾಧಕರೆಲ್ಲರೂ ಸರ್ಕಾರಿ ಶಾಲೆಯಲ್ಲಿ ಓದಿದವರೇ ಹೆಚ್ಚು. ಈಗ ಉನ್ನತ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಮಗೆ ಈಗ ಸರ್ಕಾರಿ ಉದ್ಯೋಗ ಬೇಕು ಎನ್ನುತ್ತೇವೆ. ಆದರೆ, ಸರ್ಕಾರಿ ಶಾಲೆ ಬೇಡ ಎಂಬ ಮನಸ್ಥಿತಿಯಲ್ಲಿದ್ದೇವೆ. ಇದರಿಂದ ಹೊರಬರಬೇಕು ಎಂದರು.

ಸರ್ಕಾರಿ ಶಾಲೆಗಳು ಕೇವಲ ಶಿಕ್ಷಣವನ್ನಷ್ಟೆ ನೀಡದೆ ಮಕ್ಕಳಿಗೆ ಮೌಲ್ಯ, ಬದುಕನ್ನು ನಡೆಸುವ ಕಲೆಯನ್ನು ಕಲಿಸುತ್ತವೆ. ಶಾಸಕರ ಒತ್ತಾಸೆಯಿಂದ ಡಿಜಿಟಲೈಸ್(ತಾಂತ್ರಿಕ) ಶಿಕ್ಷಣ ಮತ್ತು ಆಂಗ್ಲ ಮಾಧ್ಯಮದ ಶಿಕ್ಷಣಕೂಡ ದೊರೆಯುತ್ತಿದೆ. ಇದರಿಂದ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ ಎಂದರು.

ಈ ವೇಳೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರು ಹಾಗೂ ಪೋಷಕರ ಮನರಂಜಿಸಿದವು.

ಶಾಲಾ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಹಾಗೂ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಸೇರಿದಂತೆ, ರಾಜ್ಯದ ಓಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿ ಭಾವನ ಬಿ ಅರಸು ಹಾಗೂ ಗಣ್ಯರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷ ಜಿ.ಎಂ.ಮಹದೇವು ಮತ್ತು ಸದಸ್ಯರು, ಮಳವಳ್ಳಿ ಅಕ್ಷರ ದಾಸೋಹದ ನಿರ್ದೇಶಕ ಬಿ.ಮಹದೇವು,ಉದ್ಯಮಿ ಆನಂದ್ ಕುಮಾರ್, ಗ್ರಾಪಂ ಅಧ್ಯಕ್ಷೆ ಗುಲ್ನಾಜ್ ಬಾನು ಮತ್ತು ಉಪಾಧ್ಯಕ್ಷರು, ಸದಸ್ಯರು ಹಾಗೂ ಮುಖ್ಯ ಶಿಕ್ಷಕ ಕುಳ್ಳೇಗೌಡ ಮತ್ತು ಶಿಕ್ಷಕವೃಂದ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಳಚೆ ನೀರಲ್ಲಿ ತಟ್ಟೆ ತೊಳೆದ ಪ್ರಕರಣ; ಶಿಕ್ಷಕಿ ಅಮಾನತು
ಅಲೆಮಾರಿ ಜನಾಂಗದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ಪಲ್ಲವಿ