ಅಮಿನಗಡದಲ್ಲಿ ಕೃಷಿ ಸ್ಪಂದನ, ವಸ್ತು ಪ್ರದರ್ಶನ ಕಾರ್ಯಕ್ರಮ

KannadaprabhaNewsNetwork |  
Published : Sep 14, 2026, 01:30 AM IST
12ಕೆಪಿಕೆವಿಟಿ01:  | Kannada Prabha

ಸಾರಾಂಶ

ಸಮೀಪದ ಅಮೀನಗಡ ಗ್ರಾಮದಲ್ಲಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ "ಕೃಷಿ ಸ್ಪಂದನ 2026 ಕೃಷಿ ವಸ್ತು ಪ್ರದರ್ಶನ " ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ಕವಿತಾಳ

ಸಮೀಪದ ಅಮೀನಗಡ ಗ್ರಾಮದಲ್ಲಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ "ಕೃಷಿ ಸ್ಪಂದನ 2026 ಕೃಷಿ ವಸ್ತು ಪ್ರದರ್ಶನ " ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ತಾಂತ್ರಿಕತೆ ವಿಭಾಗದ ಡೀನ್ ಡಾ. ಕೆ.ವಿ.ಪ್ರಕಾಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರಸಗೊಬ್ಬರ ಮತ್ತು ಕ್ರಿಮಿನಾಶಕಗಳ ಮಿತ ಬಳಕೆ ನೀರಿನ ಸದ್ವಳಕೆ ಹಾಗೂ ಆಧುನಿಕ ಯಂತ್ರಗಳನ್ನು ಬಳಸಿಕೊಂಡು ರೈತರು ಆರ್ಥಿಕ ಸದೃಢತೆಯತ್ತ ಸಾಗಬೇಕು ಎಂದರು.

ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಉತ್ತಮ ಸಹಕಾರ ನೀಡಿದ್ದು, 60 ದಿನಗಳ ಈ ಶಿಬಿರದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ರೈತರೊಂದಿಗೆ ಸಂವಾದ ನಡೆಸುವ ಮೂಲಕ ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ರೈತರ ಬದುಕು ಕೃಷಿ ವಾಸ್ತವತೆ ಕೃಷಿ ಮತ್ತು ಸಾಮಾಜಿಕ ಚಟುವಟಿಕೆಗಳು ಮತ್ತು ಸಿರಿಧಾನ್ಯಗಳ ಮಹತ್ವ ಕುರಿತು ರೈತರಲ್ಲಿ ಜಾಗೃತಿ ಮೂಡಿಸಲಾಗಿದೆ. ಬೆಳೆ ವಿಮೆ ಯೋಜನೆಗಳ ಕುರಿತು ಸೂಕ್ತ ಮಾಹಿತಿ ನೀಡಲಾಗಿದೆ, ನೈಸರ್ಗಿಕ ಕೃಷಿಯತ್ತ ರೈತರ ಒಲವು ಮೂಡಿಸುವಲ್ಲಿ ವಿದ್ಯಾರ್ಥಿಗಳು ಶ್ರಮಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಗಣ್ಯರನ್ನು ಗ್ರಾಮದಲ್ಲಿ ಕುಂಭ ಕಳಸ ಮೆರವಣಿಗೆ ಮೂಲಕ ಎತ್ತಿನ ಬಂಡಿಯಲ್ಲಿ ಕರೆತರಲಾಯಿತು. ಇದೇ ವೇಳೆ ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳು ರೈತರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೃಷಿ ವಿಶ್ವವಿದ್ಯಾಲಯದ ತಜ್ಞರಾದ ಡಾ,ಡಿ.ಎಸ್. ಅಶ್ವಥ್ ನಾರಾಯಣ, ಡಾ.ಬಸವರಾಜ್ ಹುಲಗೂರು, ಡಾ.ಜಗಜೀವನ್ ರಾಮ್, ಹನುಮಂತ ನಾಯಕ್, ಅಮರೇಶ, ಸ್ಥಳೀಯರಾದ ದೇವಯ ತಾತ, ಮಂಜುನಾಥ್ ಸ್ವಾಮಿ, ಅಮರೇಗೌಡ, ಮೌನೇಶ್ ದೊಡ್ಡಮನಿ, ಆದಪ್ಪ ನಾಯಕ್, ಮಂಜೂರು ಪಾಶ, ಉತ್ತರೆಡ್ಡಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ: ಬಸವಂತಪ್ಪ
ಉಪ್ಪಾರ ವೆಂಕಟೇಶನಿಗೆ ಪೊಲೀಸರಿಂದ ಹುಡುಕಾಟ