ಕನ್ನಡಪ್ರಭ ವಾರ್ತೆ ವಡಗೇರಾ
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯುಸೆಕ್ ಕ್ಕಿಂತ ಅಧಿಕ ನೀರು ಬಿಡಲಾಗುತ್ತಿದೆ. ಅಲ್ಲದೇ ಈಗಾಗಲೇ ಎಲ್ಲಾ ಕಡೆ ಹೆಚ್ಚು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಯ ಹೊರಹರಿವು ಹೆಚ್ಚಾಗಿದೆ. ಪ್ರವಾಹ ಸಂಭವಿಸುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಮ್ಮ ಕಂದಾಯ ಇಲಾಖೆಯ ಸಿಬ್ಬಂದಿ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಡಂಗೂರ ಸಾರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಒಂದು ವೇಳೆ ಪ್ರವಾಹದ ಮುನ್ಸೂಚನೆ ಕಂಡುಬಂದಲ್ಲಿ ಅವಶ್ಯಕತೆ ಇರುವ ಕಡೆ ಕಾಳಜಿ ಕೇಂದ್ರಗಳ ವ್ಯವಸ್ಥೆ ಮಾಡಲಾಗುವುದು ಎಂದರು ತಿಳಿಸಿದರು.
ನದಿ ಪಾತ್ರದ ಜನರು ನದಿಯ ಕಡೆ ಹಾಗೂ ಬ್ರಿಡ್ಜ್ ಮೇಲೆ ತೆರಳುವಾಗ ಎಚ್ಚರಿಕೆ ವಹಿಸಬೇಕು. ನದಿಗೆ ಇನ್ನು ಹೆಚ್ಚಿನ ನೀರು ಬಿಡುವ ಸಂಭವವಿದ್ದು, ಜನ-ಜಾನುವಾರು ಹಾಗೂ ಮೀನುಗಾರರು ನದಿಗೆ ಇಳಿಯದಂತೆ ಸೂಚಿಸಿದರು.ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ್, ತಹಸೀಲ್ದಾರ್ ಶ್ರೀನಿವಾಸ್ ಚಾಪೆಲ್, ಉಪ ತಹಸೀಲ್ದಾರ್ ಸಂಗಮೇಶ್ ದೇಸಾಯಿ, ಕಂದಾಯ ನಿರೀಕ್ಷಕ ಸಂಜೀವ್ ಕುಮಾರ್ ಕಾವಲಿ, ಗ್ರಾಮ ಆಡಳಿತ ಅಧಿಕಾರಿಗಳಾದ ನಟರಾಜ, ಬಸವರಾಜ ಮೂಡಗಿ, ಕೊಟ್ರೇಶ್ ಸೇರಿದಂತೆ ಇತರರಿದ್ದರು.