ಕೃಷ್ಣ ಮಠದ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ನಡೆಸುವ ಬಗ್ಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಮಂಗಳವಾರ ನಗರಸಭೆಯಲ್ಲಿ ಅಷ್ಟ ಮಠಗಳ ದಿವಾನರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಕೃಷ್ಣ ಮಠದ ಪರಿಸರದ ಮೂಲ ಸೌಕರ್ಯ ಅಭಿವೃದ್ಧಿ ನಡೆಸುವ ಬಗ್ಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಮಂಗಳವಾರ ನಗರಸಭೆಯಲ್ಲಿ ಅಷ್ಟ ಮಠಗಳ ದಿವಾನರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.ಸಭೆಯಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ರಥಬೀದಿ ಪರಿಸರದ ಚರಂಡಿ, ಒಳ ಚರಂಡಿ ವ್ಯವಸ್ಥೆ, ದಾರಿದೀಪ ಮುಂತಾದ ಮೂಲ ಸೌಕರ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ಭವಿಷ್ಯದ 50 ವರ್ಷಗಳ ದೂರದೃಷ್ಟಿಯ ಚಿಂತನೆಯೊಂದಿಗೆ ಅಭಿವೃದ್ಧಿ ನಡೆಸುವ ನಿಟ್ಟಿನಲ್ಲಿ ಮಠದ ದಿವಾನರು ತಮ್ಮ ಸಲಹೆ ಸೂಚನೆ ನೀಡುವಂತೆ ಮನವಿ ಮಾಡಿದರು.ಕೃಷ್ಣಮಠದ ಪಾರಂಪರಿಕ ವ್ಯವಸ್ಥೆಗೆ ಧಕ್ಕೆಯಾಗದಂತೆ, ವ್ಯವಸ್ಥಿತ ಚರಂಡಿ ಹಾಗೂ ಒಳಚರಂಡಿ ವ್ಯವಸ್ಥೆಗೆ ನಗರಸಭೆಯ ಮೂಲಕ ತಾಂತ್ರಿಕ ಪರಿಣಿತರ ಮೂಲಕ ನೀಲನಕ್ಷೆ ತಯಾರಿಸಿ, ಅಷ್ಟಮಠಗಳ ಸ್ವಾಮೀಜಿ ಸಲಹೆ ಸೂಚನೆಗಳನ್ನು ಪರಿಗಣಿಸಿ ಕಾಮಗಾರಿ ನಡೆಸಲು ಯೋಜನೆ ರೂಪಿಸಲಿದ್ದು, ಕೃಷ್ಣ ಮಠಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಸಲು ಸರ್ವರ ಸಹಕಾರ ಕೋರಿದರು.ಸಭೆಯಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ, ಪೌರಾಯುಕ್ತ ಮಹೇಶ್, ನಗರಸಭಾ ಸದಸ್ಯರಾದ ಗಿರೀಶ್ ಅಂಚನ್, ಮಾನಸ ಸಿ. ಪೈ, ಗಿರಿಧರ ಕರಂಬಳ್ಳಿ, ಟಿ. ಜಿ. ಹೆಗ್ಡೆ, ಬಾಲಕೃಷ್ಣ ಶೆಟ್ಟಿ, ಪ್ರಮುಖರಾದ ಶ್ಯಾಮಪ್ರಸಾದ್ ಕುಡ್ವ, ಹರೀಶ್ ಬೈಲಕೆರೆ, ಅಷ್ಟ ಮಠದ ದಿವಾನರು, ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ದುರ್ಗಾ ಪ್ರಸಾದ್ ಮೊದಲಾದವರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.