ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಬಾಲ ಭವನದಲ್ಲಿ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ನರಸಿಂಹ ಸ್ವಾಮಿ ರಚಿತ ಗೀತೆಗಳ ಗಾಯನ ಹಾಗೂ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಸ್ತುತ ಪಡಿಸಲಾಗುವ ನಾಡಗೀತೆ ಹಾಗೂ ರೈತ ಗೀತೆಗಳ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆಯ ಸಾಹಿತಿಗಳು, ಕಲಾವಿದರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಮ್ಮದೇ ಆದ ಸಾಹಿತ್ಯ ಕೃಷಿ ಸಾಧನೆಯಿಂದ ಮನೆ ಮಾತಾಗಿದ್ದಾರೆ. ಜಿಲ್ಲೆಯ ಕೀರ್ತಿ, ಗರಿಮೆಯನ್ನು ಹೆಚ್ಚಿಸುವಲ್ಲಿ ಶ್ರಮಿಸಿದ್ದಾರೆ. ಕೆ.ಎಸ್.ನರಸಿಂಹ ಸ್ವಾಮಿ ಅವರು ತಮ್ಮ ನವಿರಾದ ಭಾವನೆಗಳನ್ನು ಕವನಗಳಲ್ಲಿ ತರುವುದರ ಮೂಲಕ ಕಲಾ ರಸಿಕರ, ಪ್ರೇಮಿಗಳ ದೇಶಭಕ್ತರ ಪ್ರೇಮ, ದೇಶಾಭಿಮಾನ ಜಾಗೃತಗೊಳಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.ಟ್ರಸ್ಟ್ನ ನೂತನ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಅವರ ಹೆಸರನ್ನು ಚಿರಸ್ಥಾಯಿ ಆಗಿಸುವಂತಹ ಗುಣ ಮಟ್ಟದ ಕಾರ್ಯಕ್ರಮ ರೂಪಿಸಿ ಸ್ಥಳೀಯ ಕಲಾವಿದರನ್ನು ಬೆಳೆಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಲಿ ಎಂದು ಶುಭ ಹಾರೈಸಿದರು.
ಕನ್ನಡ ಸಾಹಿತ್ಯ ಸಮ್ಮೇಳನವು 30 ವರ್ಷಗಳ ನಂತರ ಮಂಡ್ಯದಲ್ಲಿ ಜರುಗುತ್ತಿದ್ದು ಇಡೀ ರಾಜ್ಯದಲ್ಲೇ ಮನೆ ಮಾತಾಗುವಂತೆ ಆತಿಥ್ಯ, ಸಾಂಸ್ಕೃತಿಕ ಪರಂಪರೆ ವೈಭವೀಕರಿಸುವ ಮೂಲಕ ಜಿಲ್ಲೆ ಶ್ರೇಷ್ಠತೆ ಎತ್ತಿ ಹಿಡಿಯಬೇಕು. ಇದಕ್ಕೆ ಪೂರಕವಾಗಿ ಕಲಾವಿದರು, ಸಾಹಿತಿಗಳು, ನಾಗರೀಕರು ಸಂಪೂರ್ಣ ಸಹಕರಿಸಿ ಪೂರ್ಣ ಪ್ರಮಾಣದಲ್ಲಿ ಸಮ್ಮೇಳನದಲ್ಲಿ ಭಾಗವಹಿಸಿ ಮಂಡ್ಯ ದ ಘನತೆಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಾಯಕ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಮಾತನಾಡಿ, ಪ್ರಪಂಚದ 56 ದೇಶಗಳಲ್ಲಿ ಮಂಡ್ಯ ಜಿಲ್ಲೆಯ ವೈಶಿಷ್ಟ್ಯಗಳನ್ನು, ಕಲೆಯ ಮೂಲಕ ಸಾಬೀತುಪಡಿಸಲು ಜಿಲ್ಲೆಯ ಜನತೆಯ ಆಶೀರ್ವಾದ, ಪ್ರೋತ್ಸಾಹವೇ ಕಾರಣವಾಗಿದೆ. ಅಕಾಡೆಮಿಯು ಮುಂದಿನ ದಿನಗಳಲ್ಲಿ ಅನೇಕ ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ರೂಪಿಸಿ ಕಲಾವಿದರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.
ನಗರದ ಸದ್ವಿದ್ಯಾ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ಕೆ.ಎಸ್ನ ಗೀತೆ ಗಳ ನೃತ್ಯ ಪ್ರದರ್ಶನ ಅಪಾರ ಪ್ರಶಂಸೆಗೆ ಪಾತ್ರವಾಯಿತು.