ಕನ್ನಡಪ್ರಭ ವಾರ್ತೆ ಶನಿವಾರಸಂತೆ
ರಾಜ್ಯ ರಸ್ತೆ ಸಾರಿಗೆ ನಿಗಮ ಅರಕಲಗೂಡು ಡಿಪೋದಿಂದ ಮಾಗಲು, ಅಂಕನಹಳ್ಳಿ ಮೂಲಕ ಮನೆಹಳ್ಳಿ ಮಠಕ್ಕೆ ಬರುವ ಕೆ.ಎಸ್ ಆರ್.ಟಿ.ಸಿ. ನೂತನ ಬಸ್ ಮಾರ್ಗಕ್ಕೆ ಮಠದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.
ಕಳೆದ ಹಲವು ವರ್ಷಗಳಿಂದ ಈ ಭಾಗಕ್ಕೆ ಸರ್ಕಾರಿ ಬಸ್ ಬೇಡಿಕೆ ಇತ್ತು. ಇಲ್ಲಿನ ವಿದ್ಯಾರ್ಥಿಗಳು, ಗ್ರಾಮಸ್ಥರು ನಗರ ಪ್ರದೇಶಗಳಿಗೆ ತೆರಳಲು ಪರದಾಡುತ್ತಿದ್ದರು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಸಚಿವರು ಇಂದಿನಿಂದ ಬಸ್ ಸೌಲಭ್ಯ ಕಲ್ಪಿಸಿದ್ದಾರೆ ಎಂದರು.ಬೆಳಗ್ಗೆ 8.30ಕ್ಕೆ ಅರಕಲಗೂಡಿನಿಂದ ಹೊರಟು ಮಾಗಲು, ಅಂಕನಹಳ್ಳಿ ಮೂಲಕ ಶನಿವಾರಸಂತೆ ನಂತರ ಅರಕಲಗೂಡಿಗೆ ತೆರಳಲಿದೆ. ಸಂಜೆ 4 ಗಂಟೆಗೆ ಮತ್ತೊಂದು ಬಸ್ ಇದೇ ಮಾರ್ಗವಾಗಿ ಸಂಚರಿಸಲಿದೆ ಎಂದರು.
ಮನೆ ಹಳ್ಳಿ ಮಠದ ಸಮಿತಿ ಪದಾಧಿಕಾರಿಗಳಾದ ಮಂಜುನಾಥ್, ಚಂದ್ರಶೇಖರ್, ಸೋಮಣ್ಣ, ಪ್ರಮುಖರಾದ ಬಸಪ್ಪ, ರಾಜಣ್ಣ, ಮಲ್ಲೇಶ್, ಬಿ. ಪಿ.ಬಸಪ್ಪ, ಚಂದ್ರಶೇಖರ್, ಧರ್ಮಪ್ಪ, ಶೈಲಮ್ಮ, ಶೀಲಮ್ಮ, ಉಮಾ, ಪುಷ್ಪ, ಕಮಲ ಮತ್ತಿತರರು ಹಾಜರಿದ್ದರು.