ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಅಧ್ಯಕ್ಷತೆ ವಹಿಸಿದ್ದ ಶಾಸಕ ಹರೀಶ್ ಪೂಂಜ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗದಂತೆ ವ್ಯವಸ್ಥೆ ಸರಿಪಡಿಸಿ ಬೆಳಗ್ಗೆ 8 ರಿಂದ 9.30ರ ವರೆಗೆ ಅಗತ್ಯ ಸ್ಥಳಗಳಲ್ಲಿ ಬಸ್ ಗಳನ್ನು ಹೆಚ್ಚಿಸಿ ಹಾಗೂ ಬಂದಿರುವ ಅಹವಾಲುಗಳ ಕುರಿತು ವಾರದೊಳಗೆ ವರದಿ ನೀಡಿ, ಉಜಿರೆಯ ಟಿಸಿ ಪಾಯಿಂಟ್ ಸಮಯ ವಿಸ್ತರಿಸಿ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳೂರು ಡಿಪೋದ ಡಿಸಿ ರಾಜೇಶ್ ಶೆಟ್ಟಿ ಮಾತನಾಡಿ, ಜನಸ್ಪಂದನೆ ಕಾರ್ಯಕ್ರಮದ ಮೂಲಕ ತಾಲೂಕಿನ ಮೂಲೆ ಮೂಲೆಗಳ ಸಮಸ್ಯೆ ಗೊತ್ತಾಗಿದೆ ಮುಂದಿನ ದಿನಗಳಲ್ಲಿ ಮಂಗಳೂರು- ಧರ್ಮಸ್ಥಳ ರೂಟ್ ನಲ್ಲಿ ಎಲೆಕ್ಟ್ರಿಕ್ ಮತ್ತು ರಾಜಹಂಸ ಬಸ್ ಗಳ ಓಡಾಟ ನಡೆಸುವ ಕುರಿತು ಚಿಂತನೆ ನಡೆದಿದೆ ಎಂದರು.ಪುತ್ತೂರು ಡಿಪೋ ಡಿಸಿ ಅಮಲಿಂಗಯ್ಯ ಪಿ. ಹಾಸು ಪೂಜಾರಿ ಮಾತನಾಡಿ, ಈಗಿರುವ ವ್ಯವಸ್ಥೆಗಳಲ್ಲಿ ಇರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಒದಗಿಸಲಾಗುವುದು ಎಂದರು.
ಯದುಪತಿ ಗೌಡ, ಸುಧೀರ್ ಕುಮಾರ್, ಶ್ರೀನಿವಾಸರಾವ್, ಮೀನಾಕ್ಷಿ, ಭಾರತೀ ಶೆಟ್ಟಿ, ರತ್ನಾಕರ ಬುಣ್ಣನ್, ಆಶಾ ಸಲ್ದಾನ, ಧರಿತ್ರಿ ಭಿಡೆ, ವಸಂತಿ, ಸಂತೋಷ್ ಮತ್ತಿತರರು ಅಹವಾಲು ಮಂಡಿಸಿದರು.