ಕನ್ನಡಪ್ರಭ ವಾರ್ತೆ ಕೂಡಲಸಂಗಮ
ರಥೋತ್ಸವಕ್ಕೂ ಪೂರ್ವದಲ್ಲಿ ಗಂಜಿಹಾಳದಿಂದ ತಳಿರು ತೋರಣ, ನಂದಿಕೋಲು ಕುಣಿತ, ಬಾಳೆಕಂಬದ ಮೆರವಣಿಗೆ, ಬೆಳಗಲ್ಲದಿಂದ ರಥೋತ್ಸವ ಹಗ್ಗ ತರುವುದು, ಇದ್ದಲಗಿಯ ಹಿಲಾಲ, ಗುಳೆದ್ದಗುಡ್ಡದ ಹುಚ್ಚಯನ ಕಳಸ ಮುಂತಾದವುಗಳನ್ನು ಗಂಜಿಹಾಳ, ಇದ್ದಲಗಿ, ಬೆಳಗಲ್ಲ, ಕೆಂಗಲ್ಲ, ಕಜಗಲ್ಲ, ಗುಳೆದಗುಡ್ಡದ ಭಕ್ತರು ಎತ್ತಿನ ಬಂಡಿ, ಟ್ರ್ಯಾಕ್ಟರ್ನಲ್ಲಿ ಮೆರವಣಿಗೆಯಲ್ಲಿ ತಂದರು.
ರಥೋತ್ಸವದಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ, ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ, ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಮಹಾದೇವ ಮುರಗಿ ಇತರರು ಇದ್ದರು. ನವೀಕರಣಗೊಂಡ ರಥ ಎಳೆಯಲು ವಿವಿಧ ಭಾಗಗಳಿಂದ ಅಪಾರ ಭಕ್ತರು ಆಗಮಿಸಿದ್ದರು.