ಎಸ್ಸೆಂಕೆಗೆ ಗೌರವ ಡಾಕ್ಟರೆಟ್‌ ಕೊಟ್ಟ ಮೈಸೂರು ವಿವಿಗೆ ಕೀರ್ತಿ: ದಿನೇಶ್‌

KannadaprabhaNewsNetwork |  
Published : Mar 02, 2024, 01:45 AM IST
ದಿನೇಶ್‌ ಗೂಳಿಗೌಡ | Kannada Prabha

ಸಾರಾಂಶ

ಮೈಸೂರು ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೆಟ್‌ ಘೋಷಿಸಿರುವುದರಿಂದ ವಿಶ್ವವಿದ್ಯಾಲಯದ ಗೌರವ ಇನ್ನಷ್ಟು ಹೆಚ್ಚಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮೈಸೂರು ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೆಟ್‌ ಘೋಷಿಸಿರುವುದರಿಂದ ವಿಶ್ವವಿದ್ಯಾಲಯದ ಗೌರವ ಇನ್ನಷ್ಟು ಹೆಚ್ಚಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾರ್ಚ್‌ 3ರಂದು ನಡೆಯುವ ವಿವಿಯ 104ನೇ ಘಟಿಕೋತ್ಸವದಲ್ಲಿ ಎಸ್‌.ಎಂ.ಕೃಷ್ಣ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲು ವಿವಿಯ ಸಿಂಡಿಕೇಟ್‌ ತೀರ್ಮಾನಿಸಿರುವುದು ಅತ್ಯಂತ ಸ್ವಾಗತಾರ್ಹ. ಈ ವಿವಿಯಲ್ಲಿ ಓದಿದ ಹಳೆಯ ವಿದ್ಯಾರ್ಥಿಯಾದ ಕೃಷ್ಣ ಅವರಿಗೆ ಗೌರವ ಡಾಕ್ಟರೇಟ್‌ ನೀಡುತ್ತಿರುವುದರಿಂದ ಮೈಸೂರು ವಿಶ್ವ ವಿದ್ಯಾಲಯಕ್ಕೆ ಬಹು ದೊಡ್ಡ ಕೀರ್ತ ಬಂದಂತಾಗಿದೆ. ಇದಕ್ಕಾಗಿ ಮಂಡ್ಯ ಜಿಲ್ಲೆಯ ಜನರ ಪರವಾಗಿ ವಿವಿಯನ್ನು ಅಭಿನಂದಿಸುವುದಾಗಿ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಪೀಳಿಗೆ ಪೋಷಕಾಂಶಗಳ ಕೊರತೆ
ಪುಟ 2ಕ್ಕೆ ಬಾಟಮ್....ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ