ಕನ್ನಡಪ್ರಭ ವಾರ್ತೆ ಬೆಳ್ತಂಗಡಿಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕುಕ್ಕಾವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮುಂಡಾಜೆ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕುಕ್ಕಾವು, ಜನಜಾಗೃತಿ ಸಮಿತಿ ಕುಕ್ಕಾವು ಸಹಕಾರದೊಂದಿಗೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶಿಬಿರ ಏರ್ಪಡಿಸಲಾಗಿತ್ತು.ಕೂಡಬೆಟ್ಟು ಸದಾಶಿವೇಶ್ವರ ದೇವಸ್ಥಾನದ ಮೊಕ್ತೇಸರ ವಾಸುದೇವ ಕಕ್ಕೆನೇಜಿ ಶಿಬಿರ ಉದ್ಘಾಟಿಸಿದರು. ಉಜಿರೆ ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೇಲ್ವಿಚಾರಕ ರವೀಂದ್ರ ಗುಡಿಗಾರ್ ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿದೊರೆಯುವ ವೈದ್ಯಕೀಯ ಸೇವೆಗಳ ಮಾಹಿತಿ ನೀಡಿದರು.ಸ್ಥಳೀಯ ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಅಧ್ಯಕ್ಷತೆ ವಹಿಸಿದ್ದರು. ತಾಲೂಕಿನ ಯೋಜನಾಧಿಕಾರಿ ಯಶೋಧರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಂಜ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ನೋಣಯ್ಯ ಗೌಡ, ಬಂಗಾಡಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಆನಂದ ಗೌಡ, ಒಕ್ಕೂಟದ ಅಧ್ಯಕ್ಷ ಜಗದೀಶ್ ಕುಂಬಾರ ಮತ್ತು ಸುರೇಶ್, ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ಲೋಕೇಶ್ ಕುಂಬಾರು ಇದ್ದರು.