ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ
ಶ್ರೀ ದೇವಳದ ಆನೆ ಯಶಸ್ವಿ ಹೊರಾಂಗಣದಲ್ಲಿ ನೀರು ತುಂಬಿಸಿದುದರಿಂದ ಹೆಚ್ಚಿನ ಸಂಭ್ರಮವನ್ನು ಪಟ್ಟಿತು. ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ಮಕ್ಕಳೊಂದಿಗೆ ನೀರಾಟವಾಡಿ ಸಂಭ್ರಮಿಸಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಎಇಒ ರಾಜಣ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ದರ್ಬೆ, ಪಿಜಿಎಸ್ಎನ್ ಪ್ರಸಾದ್, ಶ್ರೀವತ್ಸ ಬೆಂಗಳೂರು, ಮನೋಹರ ರೈ, ಲೋಕೇಶ್ ಮುಂಡೋಕಜೆ, ಶೋಭಾ ಗಿರಿಧರ್, ವನಜಾ.ವಿ.ಭಟ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ದೇವಳದ ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ಎ.ಆರ್. ಮತ್ತಿತರರಿದ್ದರು.ಜಾತ್ರೆ ಬಳಿಕ ದೇವಳದ ಪ್ರಧಾನ ಸೇವೆಯಾದ ಸರ್ಪಸಂಸ್ಕಾರವು ಸೇವೆಯು ಪುನರಾರಂಭಗೊಂಡಿದೆ.
ಗೋಪುರ ನಡಾವಳಿ: ಜಾತ್ರಾ ಮಹೋತ್ಸವದ ನಂತರ ರಕ್ಷಣಾ ದೈವಗಳಿಗೆ ಕೊಡುವ ಕಟ್ಟು ಕಟ್ಟಳೆಯ ಕೋಲ ಮತ್ತು ಪರ್ವಗಳನ್ನೊಳಗೊಂಡ ಗೋಪುರ ನಡಾವಳಿಯು ಶ್ರೀ ದೇವಳದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗಿನ ತನಕ ಜರುಗಿತು.ಸೋಮವಾರ ಬೆಳಗ್ಗೆ ಕ್ಷೇತ್ರ ದೈವ ಪುರುಷರಾಯವು ಕುಮಾರಧಾರ ನದಿಗೆ ತೆರಳಿ ಮತ್ಸ್ಯ ತೀರ್ಥದಲ್ಲಿ ಪವಿತ್ರ ಮೀನುಗಳಿಗೆ ಅಕ್ಕಿ ಹಾಕುವುದರ ಮೂಲಕ ಆಹಾರವನ್ನು ನೀಡಿ ಹರಸಿತು.ಭಾನುವಾರ ರಾತ್ರಿ ಶ್ರೀ ದೈವಗಳ ಭಂಡಾರ ತೆಗೆಯಲಾಯಿತು. ಬಳಿಕ ಪುರೋಹಿತ ನಾರಾಯಣ ಭಟ್ ನೂಚಿಲ ಪ್ರಸಾದ ನೀಡಿದರು. ನಂತರ ದೈವಗಳಿಗೆ ಗಗ್ಗರ ಸೇವೆ ಆರಂಭವಾಯಿತು.* ಜ.೧೬ರಂದು ಕಿರುಷಷ್ಠಿ:ಶ್ರೀ ದೇವಳದಲ್ಲಿ ಚಂಪಾಷಷ್ಠಿಯ ನಂತರ ಶ್ರೀ ದೇವರ ಕಿರುಷಷ್ಠಿ ರಥೋತ್ಸವವು ಜ.೧೬ರಂದು ಸಂಜೆ ನೆರವೇರಲಿದೆ. ಈ ಮೊದಲು ಕಿರುಷಷ್ಠಿ ಅಂಗವಾಗಿ ಶ್ರೀ ದೇವಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.