ಕನ್ನಡಪ್ರಭ ವಾರ್ತೆ ಹಲಗೂರು
ಸಂಘದ 10 ನಿರ್ದೇಶಕ ಬಲದ ಆಡಳಿತ ಮಂಡಳಿ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಅಧ್ಯಕ್ಷ ಸ್ಥಾನಕ್ಕೆ ಕುಮಾರ ಮತ್ತು ಎನ್.ಸಿ ಸ್ವಾಮಿ ನಾಮಪತ್ರ ಸಲ್ಲಿಸಿದ್ದರು. ಎನ್.ಸಿ ಸ್ವಾಮಿ ಒಂದು ಮತ ಪಡೆದರೆ, ಕುಮಾರ ಆರು ಮತ ಪಡೆದು ವಿಜಯದ ನಗೆ ಬೀರಿದರು.
ಉಪಾದ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿ ಸಂತೋಷ್ ಕುಮಾರ್ ಅವಿರೋಧ ಆಯ್ಕೆ ಘೋಷಣೆ ಮಾಡಿದರು.ನಂತರ ಅಧ್ಯಕ್ಷ ಕುಮಾರ ಮಾತನಾಡಿ, ಸಂಘದ ಸದಸ್ಯರು ಗುಣಮಟ್ಟದ ಹಾಲು ಸರಬರಾಜು ಮಾಡುವ ಮೂಲಕ ಸಂಘದ ಶ್ರೇಯೋಭಿವೃದ್ಧಿಗೆ ಕೈಜೋಡಿಸಕು ಎಂದು ಮನವಿ ಮಾಡಿದರು. ಉಪಾಧ್ಯಕ್ಷ ವೆಂಕಟೇಶ್ ಮಾತನಾಡಿ, ಮುಂದಿನ ದಿನಗಳಲ್ಲಿ ಎಲ್ಲಾ ನಿರ್ದೇಶಕರು ಒಗ್ಗೂಡಿ ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.
ಸರ್ಕಾರಿ ಶಾಲೆಯಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ
ಉಪಾಧ್ಯಕ್ಷ ದಾಸಭೋಯಿ ಮಾತನಾಡಿ, ಗೊಲ್ಲರಹಳ್ಳಿ ಮತ್ತು ನಂಜಾಪುರದಲ್ಲಿ ಗ್ರಂಥಾಲಯ ಪ್ರಾರಂಭ ಮಾಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಗ್ರಂಥಾಲಯದಲ್ಲಿ ಕವಿಗಳು ಮಹನೀಯರು ಬರೆದಿರುವ ಪುಸ್ತಕಗಳು ಇದೆ. ಅವುಗಳನ್ನು ಓದಿದರೆ ಜ್ಞಾನಾರ್ಜನೆಗೂ ಸಹ ಸಹಕಾರಿಯಾಗಲಿದೆ ಎಂದರು.
ಈ ವೇಳೆ ಗ್ರಾಪಂ ಹೇಮಾವತಿ ಸಿದ್ದಯ್ಯ ಮಹಾದೇವಮ್ಮ ಕುಳ್ಳ ಮಾಧು, ಪಿಡಿಒ ಮಲ್ಲಿಕಾರ್ಜುನ, ಕಾರ್ಯದರ್ಶಿ ಕಾಲರಾಜು, ಬಿಲ್ ಕಲೆಕ್ಟರ್ ಪ್ರಕಾಶ್, ಸಿ ಆರ್ ಪಿ ಯ ಶಿಕ್ಷಕ ಪುಟ್ಟರಾಜು, ಶಿಕ್ಷಕ ಬಸವರಾಜು, ಮುಖಂಡರಾದ ಕುನ್ನಯ್ಯ, ಕಾಂತರಾಜು, ಸಿದ್ದರಾಜು, ಮಂಜು , ಸೇರದಂತೆ ಇತರರು ಇದ್ದರು.