ಕನ್ನಡಪ್ರಭ ವಾರ್ತೆ ಹಾಸನ
ಜಿಲ್ಲೆಯಲ್ಲಿ ಕೆಲವರು ಭಾಷಣ ಮಾಡಿದ್ದಾರೆ, ಅವರ ಹೆಸರನ್ನು ನಾನು ಹೇಳುವುದಿಲ್ಲ. ಸೋತಿದ್ದವರನ್ನು ಗಂಡಸಿ ಕ್ಷೇತ್ರದಲ್ಲಿ ಬೆಳೆಸಿದ್ದು ರೇವಣ್ಣ. ಇನ್ನೊಬ್ಬರನ್ನು ರಾಜ್ಯಸಭೆ ಸದಸ್ಯರನ್ನಾಗಿ ಮಾಡಿದೆ. ನಾನು ಅವರ ಮಟ್ಟಕ್ಕೆ ಇಳಿಯುವುದಿಲ್ಲ ಎಂದು ಶಾಸಕ ಶಿವಲಿಂಗೇಗೌಡ ಹಾಗೂ ಎಚ್.ಕೆ ಜವರೇಗೌಡ ಅವರಿಗೆ ಕುಟುಕಿದರು. ತಾನು ಪ್ರಧಾನಿ ಆಗಿದ್ದ ವೇಳೆ ಕಟ್ಟಾಯ ಭಾಗದ ಜನರ ಅನುಕೂಲಕ್ಕೆ ಯಗಚಿ ಜಲಾಶಯ ನಿರ್ಮಿಸಿದೆ,ಆದರೆ ೧೯೯೧ ರಲ್ಲಿ ನನ್ನನ್ನು ಸೋಲಿಸಿ ಜಿ. ಪುಟ್ಟಸ್ವಾಮಿಗೌಡ ಹಾಸನ ಜಿಲ್ಲೆಯ ಸುಮಾರು ೪೫ ಸಾವಿರ ಎಕರೆ ಜಮೀನಿಗೆ ಅನುಕೂಲವಾಗಿದ್ದ ನೀರನ್ನು ಚಿಕ್ಕಮಗಳೂರಿಗೆ ಕೊಂಡೊಯ್ಯುವ ಕೆಲಸ ಮಾಡಿದ್ದರಿಂದ ಈ ಭಾಗದ ಜನರಿಗೆ ಅನಾನುಕೂಲವಾಗಿದೆ ಎಂದರು.
ಸಭೆಯಲ್ಲಿ ಮಾಜಿ ಸಚಿವರಾದ ಎಚ್.ಡಿ. ರೇವಣ್ಣ, ಎಚ್.ಕೆ. ಕುಮಾರಸ್ವಾಮಿ, ಜೆಡಿಎಸ್ ಮುಖಂಡರಾದ ಕೆ.ಎಂ. ರಾಜೇಗೌಡ, ಬಿ.ವಿ. ಕರೀಗೌಡ, ಎಸ್. ದ್ಯಾವೆಗೌಡ, ರಂಗಶಟ್ಟಿ, ಮೊಸಳೆ ಹೊಸಳ್ಳಿ ಚಂದ್ರಣ್ಣ, ಕಾರ್ಲೆ ಇಂದ್ರೇಶ್, ನಾರಾಯಣಗೌಡ, ಮಾಯಿಗೌಡ, ಎಸ್.ಕೆ. ಕುಮಾರ್, ರುದ್ರಪ್ಪ ಇತರರು ಭಾಗವಹಿಸಿದ್ದರು.