ಮಹಿಳೆಯರ ಅವಮಾನಿಸುವ ಹೇಳಿಕೆಗೆ ಕುಮಾರಸ್ವಾಮಿ ಕಡಿವಾಣ ಹಾಕಿಕೊಳ್ಳಬೇಕು

KannadaprabhaNewsNetwork |  
Published : Apr 22, 2024, 02:06 AM IST
21ಎಚ್‌ವಿಆರ್‌1 | Kannada Prabha

ಸಾರಾಂಶ

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಮಹಿಳೆಯರನ್ನು ಅವಮಾನಿಸಿದ್ದಾರೆ. ಇನ್ನು ಮುಂದೆ ಇಂಥ ಮಾತುಗಳಿಗೆ ಕಡಿವಾಣ ಹಾಕಿಕೊಳ್ಳಬೇಕು ಮತ್ತು ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರ ಸಂಘಟನೆ ಮತ್ತು ಹಾವೇರಿ ಜಿಲ್ಲಾ ಮಹಿಳಾ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.

ಹಾವೇರಿ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ರಾಜ್ಯದ ಮಹಿಳೆಯರನ್ನು ಅವಮಾನಿಸಿದ್ದಾರೆ. ಇನ್ನು ಮುಂದೆ ಇಂಥ ಮಾತುಗಳಿಗೆ ಕಡಿವಾಣ ಹಾಕಿಕೊಳ್ಳಬೇಕು ಮತ್ತು ಎಚ್ಚರಿಕೆಯಿಂದ ಮಾತನಾಡಬೇಕು ಎಂದು ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರ ಸಂಘಟನೆ ಮತ್ತು ಹಾವೇರಿ ಜಿಲ್ಲಾ ಮಹಿಳಾ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಮೈಲಾರ ಮಹದೇವಪ್ಪ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಶನಿವಾರ ಪ್ರತಿಭಟನಾ ಜಾಥಾ ನಡೆಯಿತು. ನಂತರ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು. ಹಸೀನಾ ಹೆಡಿಯಾಲ ಮಾತನಾಡಿ, ‘ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಸಿಕ್ಕಿದೆ. ಪ್ರತಿಪಕ್ಷಗಳ ನಾಯಕರನ್ನು ಜರಿಯುವ ನೆಪದಲ್ಲಿ ಮಹಿಳೆಯರಿಗೆ ಉಪಯುಕ್ತವಾದ ಯೋಜನೆ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ. ತಮ್ಮ ರಾಜಕೀಯದ ಬೇಳೆ ಬೇಯಿಸಿಕೊಳ್ಳಲು ಸ್ತ್ರೀಯರ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನು ನಾವು ಸಹಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಮಾಜಿ ಶಾಸಕ ಸಂಜಯ ಪಾಟೀಲ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ರಾಜಕಾರಣಿಗಳು ನೀಡುತ್ತಿರುವ ಹಗುರ ಮತ್ತು ಅವಹೇಳನಕಾರಿ ಹೇಳಿಕೆಯಿಂದ ಮಹಿಳೆಯರು ನೊಂದಿದ್ದಾರೆ. ಇಂಥ ಹೇಳಿಕೆಗಳನ್ನು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಹಿರಿಯ ರಾಜಕಾರಣಿಗಳು ಖಂಡಿಸುತ್ತಿಲ್ಲ. ಮೌನಕ್ಕೆ ಜಾರಿರುವ ನಾಯಕರ ವಿರುದ್ಧ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ರಾಜು ಆಲದಹಳ್ಳಿ, ಶಿವರಾಜ ಕಳ್ಳಿಮನಿ, ಪ್ರೇಮಕ್ಕ ಕರಿಬಸಕ್ಕ, ಉಡಚವ್ವ ಯಲ್ಲಾಪುರ, ಬೀಬಿಜಾನ್‌ ಯಲವಗಿ, ಸಾವಕ್ಕ ಕೊರಗರ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ