ಕನ್ನಡಪ್ರಭ ವಾರ್ತೆ ತುಮಕೂರು
ಸುಮಾರು 1 ಗಂಟೆ ಕಾಲ ಇವರಿಬ್ಬರೂ ಮಾತುಕತೆ ನಡೆಸಿದರು. ಬಳಿಕ ಸುರೇಶಗೌಡರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಕುಮಾರಸ್ವಾಮಿಯವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಎನ್.ಡಿ.ಎ ಭಾಗವಾಗಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಾಡಲಾಯಿತು ಎನ್ನಲಾಗಿದೆ.
ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆ.ಡಿ.ಎಸ್ ಮೈತ್ರಿ ಏರ್ಪಟ್ಟಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಸೀಟುಗಳಲ್ಲಿಯೂ ಈ ಮೈತ್ರಿಕೂಟ ಜಯಭೇರಿ ಬಾರಿಸಲಿದ್ದು ಈ ಮೂಲಕ ಪ್ರಧಾನಿ ಮೋದಿ ಅವರ ಕೈಬಲಪಡಿಸಿ ದೇಶದಲ್ಲಿ ಸುಭದ್ರ ಮತು ಸ್ಥಿರ ಆಡಳಿತಕ್ಕೆ ನೆರವಾಗುತ್ತದೆ ಎಂದು ಸುರೇಶ್ ಗೌಡರು ಅಭಿಪ್ರಾಯಪಟ್ಟಿದ್ದಾರೆ.