ಕುಂಬಾರ ಸಮಾಜ ಸಮುದಾಯ ಭವನ ನಿರ್ಮಾಣಕ್ಕೆ ಸಚಿವ ಎಚ್‌.ಕೆ. ಪಾಟೀಲ ಭೂಮಿ ಪೂಜೆ

KannadaprabhaNewsNetwork |  
Published : Jul 09, 2025, 12:28 AM IST
ಗದಗ ನಗರದ ಹಾತಲಗೇರಿ ರಸ್ತೆಯಲ್ಲಿ ಕುಂಬಾರ ಸಮಾಜ ಸಮುದಾಯ ಭವನಕ್ಕೆ ಸಚಿವ ಡಾ. ಎಚ್.ಕೆ.ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

. ಗದಗ ನಗರದ ಹಾತಲಗೇರಿ ರಸ್ತೆಯಲ್ಲಿಯ ಕುಂಬಾರ ಸಮಾಜ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ಗದಗ: ನಗರದ ಹಾತಲಗೇರಿ ರಸ್ತೆಯಲ್ಲಿಯ ಕುಂಬಾರ ಸಮಾಜ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು. 2023-24ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ರು.10 ಲಕ್ಷ ಹಾಗೂ ವಿಪ ಸದಸ್ಯ ಎಸ್.ವಿ. ಸಂಕನೂರ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅಂದಾಜು 3 ಲಕ್ಷ ರು.ಗಳ ಅನುದಾನವನ್ನು ಸಮುದಾಯ ಭವನ ನಿರ್ಮಾಣ ಮಾಡಲು ಮಂಜೂರಿ ಮಾಡಿದ್ದು ಕಟ್ಟಡ ನಿರ್ಮಾಣಕ್ಕೆ ಸಚಿವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕುಂಬಾರ ಸಮಾಜದ ಅಧ್ಯಕ್ಷ ಶಿವಾನಂದ ಚಕ್ರಸಾಲಿ ಮಾತನಾಡಿ, ಕುಂಬಾರ ಸಮಾಜದ ಸಮುದಾಯ ಭವನದ ಹಲವು ವರ್ಷಗಳ ಕನಸು ನನಸಾಗಿದ್ದು, ಸಣ್ಣ ಕುಂಬಾರ ಸಮುದಾಯಕ್ಕೆ ಸಚಿವರು ಅನುದಾನ ನೀಡಿ ಸಹಾಯ ಮಾಡಿದ್ದು ನಮ್ಮ ಸಮಾಜ ತಮಗೆ ಋಣಿಯಾಗಿರುತ್ತದೆ. ನಮ್ಮ ಸಮುದಾಯವು ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಆದ್ದರಿಂದ ನಮ್ಮ ಸಮುದಾಯಕ್ಕೆ ರಾಜಕೀಯವಾಗಿ ಬಲ ನೀಡುವದರೊಂದಿಗೆ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಬೆಂಬಲ ನೀಡಬೇಕು ಎಂದು ವಿನಂತಿಸಿದರು.ವಿಪ ಶಾಸಕ ಎಸ್.ವಿ. ಸಂಕನೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಪಂಚ ಗ್ಯಾರಂಟಿಗಳ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ, ಪ್ರಭು ಬುರಬುರೆ, ವೀರನಗೌಡ ಪಾಟೀಲ, ಎಸ್.ಎನ್. ಬಳ್ಳಾರಿ, ಸಿದ್ದು ಪಾಟೀಲ, ಅಶೋಕ ಮಂದಾಲಿ, ವಿಠ್ಠಲ ಕುಂಬಾರ, ಮುರೆಗೆಪ್ಪ ಕೆರಿಯವರ, ಸುರೇಶ ಕುಂಬಾರ, ಜಕ್ಕಪ್ಪ ಕುಂಬಾರ, ವೀರೇಶ ಕುಂಬಾರ, ವೀರಪ್ಪ ಕುಂಬಾರ, ವೀರಣ್ಣ ಚಕ್ರಸಾಲಿ, ಆಂಜನೇಯ ಕುಂಬಾರ, ಈಶ್ವರಪ್ಪ ಕುಂಬಾರ, ಮಹೇಶ ಕುಂಬಾರ, ಅನಿಲ ಕುಂಬಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಬಲ ಬೆಲೆಯಡಿ ಸೋಯಾಬೀನ್‌ ಖರೀದಿ ನೋಂದಣಿ ಬಂದ್‌
ಅತ್ಯಾಧುನಿಕ ತಂತ್ರಜ್ಞಾನದಿಂದ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ