ಕುಂದಾಪುರ: ಐಎಂಜೆ ಪದವಿ ಕಾಲೇಜಿನಲ್ಲಿ ಕಲೋತ್ಸವ ಸಂಭ್ರಮ

KannadaprabhaNewsNetwork |  
Published : Apr 02, 2025, 01:02 AM IST
01ಕಲೋತ್ಸವ | Kannada Prabha

ಸಾರಾಂಶ

ಮೂಡ್ಲಕಟ್ಟೆಯ ಐಎಂಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಾ ಅನಾವರಣದ ವೇದಿಕೆಯಾದ ‘ಕಲೋತ್ಸವ- 2025’ ವಿಜೃಂಭಣೆಯಿಂದ ನಡೆಯಿತು. ಪ್ರಥಮ, ದ್ವಿತೀಯ ಹಾಗೂ ತೃತೀಯ ಪದವಿ ತರಗತಿಗಳ ನಡುವೆ ನಡೆದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ತಮವಾದ ಪ್ರದರ್ಶನ ನೀಡಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ಪದವಿ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಾ ಅನಾವರಣದ ವೇದಿಕೆಯಾದ ‘ಕಲೋತ್ಸವ- 2025’ ವಿಜೃಂಭಣೆಯಿಂದ ನಡೆಯಿತು. ಪ್ರಥಮ, ದ್ವಿತೀಯ ಹಾಗೂ ತೃತೀಯ ಪದವಿ ತರಗತಿಗಳ ನಡುವೆ ನಡೆದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ತಮವಾದ ಪ್ರದರ್ಶನ ನೀಡಿದರು.ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಂಕರ ನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್, ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸಂಸ್ಕಾರದ ಮೂಲಕ ಕಲೆ ಉನ್ನತವಾದ ಹಂತವನ್ನು ತಲುಪುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿ ತನ್ನ ಜೀವನದಲ್ಲಿ ಉತ್ತಮ ಸಂಸ್ಕಾರವನ್ನು ರೂಢಿಸಿಕೊಳ್ಳಬೇಕೆಂದು ವಚನಗಳ ಉದಾಹರಣೆಯೊಂದಿಗೆ ತಿಳಿಸಿದರು.ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ, ಸಂಸ್ಥೆಯು ವಿದ್ಯಾರ್ಥಿಗಳ ಪ್ರತಿಭೆಗೆ ಉತ್ತಮವಾದ ವೇದಿಕೆಗಳನ್ನು ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಶುಭ ಹಾರೈಸಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಪ್ರತಿಭಾ ಎಂ. ಪಟೇಲ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಜಯಶೀಲ್ ಕುಮಾರ್, ಲಲಿತ ಕಲಾ ಸಂಘದ ಸಂಯೋಜಕರಾದ ಗಣಿತಶಾಸ್ತ್ರ ಉಪನ್ಯಾಸಕಿ ರಕ್ಷಿತಾ ಅಡಿಗ ಹಾಗೂ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ನಿಧಿ ಉಪಸ್ಥಿತರಿದ್ದರು.ವಿದ್ಯಾ ಅಕಾಡೆಮಿಯ ಶಿಕ್ಷಕ ಸಚಿನ್ ಹಾಗೂ ನರ್ಸಿಂಗ್ ಕಾಲೇಜಿನ ಉಪ ಪ್ರಾಂಶುಪಾಲರಾದ ರೂಪಶ್ರೀ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದರು. ಗಣಕಶಾಸ್ತ್ರದ ಉಪನ್ಯಾಸಕಿ ನಾಫಿಯ ಅಕ್ತಾರಿ ಕಾರ್ಯಕ್ರಮವನ್ನು ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌