ಕನ್ನಡಪ್ರಭ ವಾರ್ತೆ ಕುಂದಾಪುರ
ಈ ಸಂದರ್ಭ ಸಹಕಾರ ಸಚಿವಾಲಯ ನೂತನ ಪ್ರಯತ್ನಗಳ ಮೂಲಕ ಸಹಕಾರ ಚಳುವಳಿಯನ್ನು ಬಲಪಡಿಸುವುದು ಎಂಬ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದ ನಿವೃತ್ತ ಪ್ರಾಧ್ಯಾಪಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ವಿಕಸಿತ ಭಾರತದಲ್ಲಿ ಬಡತನ, ನಿರುದ್ಯೋಗ ತೊಡೆಯುವ ಸುಂದರ ಪರಿಕಲ್ಪನೆಯನ್ನು ಸಾಧಿಸಬೇಕಾದರೆ ನಮ್ಮ ಮೊದಲ ಆದ್ಯತಾ ವಲಯವಾಗಿ ಸಹಕಾರ ಕ್ಷೇತ್ರವನ್ನು ಒಪ್ಪಿಕೊಂಡು ನಡೆಯಬೇಕಾದ ಅನಿವಾರ್ಯತೆ ಇದೆ. ಬರೀ ಕೈಗಾರಿಕೆ, ಉದ್ಯಮವನ್ನೆ ಬೆಳೆಸುವುದರ ಮೂಲಕ ವಿಕಸಿತ ಭಾರತದಲ್ಲಿ ಹಸಿವು, ನಿರುದ್ಯೋಗ ತೊಡೆದು ಹಾಕಲು ಸಾಧ್ಯವಿಲ್ಲ. ಪ್ರತಿಯೊಬ್ಬ ವ್ಯಕ್ತಿಯ ತಲಾ ಆದಾಯ ಹೆಚ್ಚಿಸುವಲ್ಲಿ ಈ ಸಹಕಾರ ವ್ಯವಸ್ಥೆಯನ್ನು ಗ್ರಾಮೀಣ ಮಟ್ಟದಿಂದ ಇನ್ನಷ್ಟು ವಿಸ್ತರಣೆ ಮಾಡಬೇಕಾದ ಅಗತ್ಯ ಇದೆ ಎಂದರು.
ನಂತರ ಸಹಕಾರ ಸಂಸ್ಥೆಯಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು. ಆತಿಥೇಯ ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್.ಗಂಗಾಧರ ಶೆಟ್ಟಿ ಪ್ರಸ್ತಾವನೆಗೈದರು. ಸಹಕಾರಿ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೂಷಾ ಕೇೂಟ್ಯಾನ್ ಸ್ವಾಗತಿಸಿದರು. ಮಂದಾರ್ತಿ ಸೇ.ಸ.ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ವಂದಿಸಿದರು.