ಗೀತಾಂಜಲಿಗೆ ಬೆಸ್ಟ್ ಡೆಲಿಗೇಟ್ ಪ್ರಶಸ್ತಿ

KannadaprabhaNewsNetwork |  
Published : Jan 15, 2026, 03:00 AM IST
ಕೌಲಾಲಂಪುರ ಯುವ ನಾಯಕತ್ವ ಸಮ್ಮೇಳನದಲ್ಲಿ ಎಂಐಟಿಕೆಯ ಗೀತಾಂಜಲಿ ಅವರಿಗೆ ಬೆಸ್ಟ್ ಡೆಲಿಗೇಟ್ ಪ್ರಶಸ್ತಿ ಪ್ರದಾನ | Kannada Prabha

ಸಾರಾಂಶ

ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಕೆ) ವಿದ್ಯಾರ್ಥಿನಿ ಗೀತಾಂಜಲಿ ಶಿವಗೊಂಡ ಚೌಗಲಾ ಅವರು ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಅತಿ ದೊಡ್ಡ ಯುವ ನಾಯಕತ್ವ ಸಮ್ಮೇಳನಗಳಲ್ಲಿ ಒಂದಾದ ಎವೈಎಂಯುಎನ್ - 2025ರಲ್ಲಿ ಭಾರತವನ್ನು ಪ್ರತಿನಿಧಿಸಿ

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಕೆ) ವಿದ್ಯಾರ್ಥಿನಿ ಗೀತಾಂಜಲಿ ಶಿವಗೊಂಡ ಚೌಗಲಾ ಅವರು ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದ ಅತಿ ದೊಡ್ಡ ಯುವ ನಾಯಕತ್ವ ಸಮ್ಮೇಳನಗಳಲ್ಲಿ ಒಂದಾದ ಎವೈಎಂಯುಎನ್ - 2025ರಲ್ಲಿ ಭಾರತವನ್ನು ಪ್ರತಿನಿಧಿಸಿದರು. ಈ ಸಮ್ಮೇಳನಕ್ಕೆ ಭಾರತದಿಂದ ಕೇವಲ 7 ಮಂದಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಅವರಲ್ಲಿ ಗೀತಾಂಜಲಿ ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ. ಅವರ ಶೈಕ್ಷಣಿಕ ಸಾಮರ್ಥ್ಯ ಹಾಗೂ ಸಂಶೋಧನಾ ಲೇಖನಗಳ ಆಧಾರದಲ್ಲಿ ಅವರನ್ನು ಈ ಸಮ್ಮೇಳನಕ್ಕೆ ಆಯ್ಕೆ ಮಾಡಲಾಗಿತ್ತು.

ಸಮ್ಮೇಳನದಲ್ಲಿ ಅತ್ಯಂತ ಸಕ್ರಿಯವಾಗಿ ಭಾಗವಹಿಸಿದ ಅವರು, ಚರ್ಚಾಗೋಷ್ಠಿಯಲ್ಲಿ ಜಾಗತಿಕ ಆರ್ಥಿಕತೆ, ತಾಂತ್ರಿಕ ಅಭಿವೃದ್ಧಿ ಹಾಗೂ ವಿಜ್ಞಾನ ಆಧರಿತ ಸಂಶೋಧನೆಯ ಪ್ರಾಮುಖ್ಯತೆ ಕುರಿತ ವಿಚಾರಗಳನ್ನು ಮಂಡಿಸಿದರು. ಅವರು ಈ ಅತ್ಯುತ್ತಮ ಪ್ರಸ್ತುತಿಗೆ ‘ಬೆಸ್ಟ್ ಡೆಲಿಗೇಟ್’ ಪ್ರಶಸ್ತಿ ಕೂಡ ದೊರೆಯಿತು.

ಗೀತಾಂಜಲಿ ಅವರ ಈ ಸಾಧನೆಗಾಗಿ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಅಧ್ಯಕ್ಷರಾದ ಸಿದ್ಧಾರ್ಥ ಜೆ. ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಪ್ರಾಂಶುಪಾಲರು, ಪ್ರಾಚಾರ್ಯರು ಗೀತಾಂಜಲಿ ಅವರನ್ನು ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ