ಕನ್ನಡಪ್ರಭ ವಾರ್ತೆ ನಾಪೋಕ್ಲು
ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಶುಕ್ರವಾರ ಮೈದಾನದ ಪೂರ್ವ ತಯಾರಿಗೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೊಡವ ಹಾಕಿ ಅಕಾಡೆಮಿ ಅನುಮತಿ ಮೇರೆಗೆ ಕೊಡವ ಕೌಟುಂಬಿಕ ಹಾಕಿ ಉತ್ಸವ ಏಪ್ರಿಲ್ ತಿಂಗಳಲ್ಲಿ ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಗ್ಯಾಲರಿ ನಿರ್ಮಾಣ ,ಮೈದಾನ ಸಿದ್ಧತೆ ಸೇರಿದಂತೆ ವಿವಿಧ ಕಾರ್ಯಗಳನ್ನು ಕೈಗೆತ್ತಿಕೊಡಲಾಗುವುದು. ಅದಕ್ಕೂ ಮುನ್ನ ಮೈದಾನದ ಸಿದ್ಧತೆಗಾಗಿ ಭೂಮಿ ಪೂಜೆ ನೆರವೇರಿಸಿ ಯಾವುದೇ ವಿಘ್ನಗಳು ಬಾರದಂತೆ ಗುರು ಕಾರಣ ಹಾಗೂ ದೈವ ದೇವರುಗಳನ್ನು ಪ್ರಾರ್ಥಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.ಕುಟುಂಬದ ಪಟ್ಟೆದಾರ ಎಸ್. ಸುಬ್ಬಯ್ಯ ವಿಶೇಷ ಪ್ರಾರ್ಥನೆ ಮಾಡಿ ಗುದ್ದಲಿಯಿಂದ ಮಣ್ಣು ಅಗೆಯುವುದರ ಮೂಲಕ ಭೂಮಿ ಪೂಜೆ ನೆರವೇರಿಸಿದರು.
ಇದಕ್ಕೂ ಮೊದಲು ಕೊಳಕೇರಿಯಲ್ಲಿರುವ ಕುಟುಂಬದ ಕೈಮಾಡ ಹಾಗೂ ಗ್ರಾಮ ದೇವತೆ ಶ್ರೀ ಭಗವತಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಲಾಯಿತು. ಪೂಜಾ ವಿಧಿ ವಿಧಾನಗಳನ್ನು ದೇವಾಲಯದ ಅರ್ಚಕ ಸೀತಾರಾಮ್ ಭಟ್ ನೆರವೇರಿಸಿ ಕೊಟ್ಟರು.